ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಿಲುಕಿಸುವ ಬೆದರಿಕೆ

ಭೋಪಾಳ – ಜನರಿಗೆ ದೂರವಾಣಿ ಕರೆ ಮಾಡಿ, ಭಯೋತ್ಪಾದಕ ಪ್ರಕರಣಗಳಲ್ಲಿ ಸಿಲುಕಿಸುವುದಾಗಿ ಬೆದರಿಸಿ ಅವರಿಂದ ಹಣ ಸುಲಿಗೆ ಮಾಡಲು ಸೈಬರ್ ಅಪರಾಧಿಗಳು ಪ್ರಯತ್ನಿಸುತ್ತಿರುವ ಘಟನೆಗಳು ಮುನ್ನೆಲೆಗೆ ಬಂದಿವೆ. ಇಂತಹ ಒಂದು ವಂಚನೆಯ ಪ್ರಕರಣದಲ್ಲಿ, ಸೈಬರ್ ಅಪರಾಧಿಗಳು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ ನಂತರ, ಭೋಪಾಳದ ವಕೀಲರಾದ ೬೮ ವರ್ಷದ ಶಿವಕುಮಾರ್ ವರ್ಮಾ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
೧. ವಕೀಲ ವರ್ಮಾ ಅವರು ಬರೆದಿದ್ದ ಒಂದು ಪತ್ರವು ಪೊಲೀಸರಿಗೆ ಲಭ್ಯವಾಗಿದೆ. ಅದರಲ್ಲಿ ಅವರು, ಪಹಲ್ಗಾಮ್ ಭಯೋತ್ಪಾದಕ ಆಕ್ರಮಣದೊಂದಿಗೆ ತಮ್ಮ ಹೆಸರನ್ನು ಜೋಡಿಸುವ ಬೆದರಿಕೆಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದಾರೆ.
೨. ತಮ್ಮ ಹೆಸರಿನಲ್ಲಿ ಒಂದು ಬ್ಯಾಂಕ್ ಖಾತೆಯನ್ನು ತೆರೆಯಲಾಗಿದ್ದು, ಅದನ್ನು ಪಹಲ್ಗಾಮ್ ಭಯೋತ್ಪಾದಕ ಆಕ್ರಮಣದ ಆರೋಪಪಟ್ಟಿಯಲ್ಲಿ ನಮೂದಿಸಲಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
೩. ಭೋಪಾಳದ ಪೊಲೀಸ್ ಆಯುಕ್ತ ಹರಿನಾರಾಯಣ ಮಿಶ್ರಾ ಅವರು, ಸೈಬರ್ ವಂಚಕರು ವರ್ಮಾ ಅವರನ್ನು ಸಂಪರ್ಕಿಸಿ, ಅವರ ಬ್ಯಾಂಕ್ ಖಾತೆಯಿಂದ ‘ಸಂದೇಹಾಸ್ಪದ ವ್ಯವಹಾರ’ ನಡೆದಿದೆ ಮತ್ತು ಅವರು ‘ಗಂಭೀರ ಅಪರಾಧ’ ಎಸಗಿದ್ದಾರೆಂದು ನಂಬಿಸುವ ಪ್ರಯತ್ನ ಮಾಡಿದ್ದಾರೆ. ಇದರಿಂದ ವರ್ಮಾ ಗಾಬರಿಗೊಂಡು ಇಂತಹ ತೀವ್ರ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.
ಸಂಪಾದಕೀಯ ನಿಲುವುಜನರ ಆರ್ಥಿಕ ವಂಚನೆ ಮಾಡುತ್ತಿದ್ದ ಸೈಬರ್ ಅಪರಾಧಿಗಳು ಈಗ ಜನರನ್ನು ಲೂಟಿ ಮಾಡಲು ಇಸ್ಲಾಮಿಕ್ ಭಯೋತ್ಪಾದನೆಯನ್ನು ಬಳಸುತ್ತಿದ್ದಾರೆ. ಇದು ಅತ್ಯಂತ ಗಂಭೀರ ವಿಷಯವಾಗಿದ್ದು, ಇಂತಹ ಅಪರಾಧಿಗಳಿಗೆ ಪೊಲೀಸರು ತಕ್ಕ ಪಾಠ ಕಲಿಸಬೇಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ