(ಪ್ರಿಸ್ತ್ರಿಪ್ಷನ್ ಅಂದರೆ ಆಧುನಿಕ ವೈದ್ಯರು ಬರೆದುಕೊಟ್ಟ ಔಷಧ)

ನದ ದೆಹಲಿ – ದೇಶಾದ್ಯಂತ ಇರುವ ಔಷಧ ಮಾರಾಟಗಾರರು ಇನ್ನು ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್ ಮಾರಾಟ ಮಾಡುವಂತಿಲ್ಲ ಎಂದು ಕೇಂದ್ರ ಸರಕಾರವು ಆದೇಶಿಸಿದೆ. ಇದರಿಂದಾಗಿ ದೇಶಾದ್ಯಂತ ಕಫ್ ಸಿರಪ್ ಸುಲಭವಾಗಿ ಸಿಗುವುದಿಲ್ಲ. ಇಲ್ಲಿಯವರೆಗೆ ಹೆಚ್ಚಿನ ಕಫ್ ಸಿರಪ್ಗಳನ್ನು ನೇರವಾಗಿ ಮಾರಾಟ ಮಾಡಲಾಗುತ್ತಿತ್ತು; ಆದರೆ ಸರಕಾರದ ಈ ಹೊಸ ನಿರ್ಧಾರದಿಂದಾಗಿ ಈ ಪದ್ಧತಿಗೆ ಕಡಿವಾಣ ಬೀಳಲಿದೆ. ಕೆಲವು ದಿನಗಳ ಹಿಂದೆ ಮಧ್ಯಪ್ರದೇಶದ ಛಿಂದ್ವಾಡ ಮತ್ತು ಸುತ್ತ-ಮುತ್ತಲಿನ ಜಿಲ್ಲೆಗಳಲ್ಲಿ ‘ಕೋಲ್ಡ್ರಿಫ್’ ಸಿರಪ್ ಸೇವನೆಯಿಂದ ಕಿಡ್ನಿ ವೈಫಲ್ಯವಾಗಿ ಕನಿಷ್ಠ 24 ಮಕ್ಕಳು ಸಾವನ್ನಪ್ಪಿದ್ದರು. ರಾಜಸ್ಥಾನ ಮತ್ತು ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿಯೂ ಇದೇ ರೀತಿಯ ಘಟನೆಗಳು ನಡೆದಿವೆ. ದೇಶದಲ್ಲಿ ಮತ್ತು ವಿದೇಶಗಳಲ್ಲಿಯೂ ಸಹ ಇಂತಹ ಘಟನೆಗಳು ಬೆಳಕಿಗೆ ಬಂದಿವೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !