೨೦೧೨ ರಲ್ಲಿ ಪೊಲೀಸ್ ವಾಹನದ ಮೇಲೆ ಬಾಂಬ್ ಎಸೆದ ಪ್ರಕರಣ

ತಿರುವನಂತಪುರಂ (ಕೇರಳ) – ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನೂರ್ ನಗರಸಭೆ ಚುನಾವಣೆಯ ಹಾಲಿ ಅಭ್ಯರ್ಥಿಗಳಾಗಿರುವ ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ (ಮಾಕಪ) ವಿ.ಕೆ. ನಿಷಾದ್ ಮತ್ತು ಟಿ.ಸಿ.ವಿ. ನಂದಕುಮಾರ್ ಎಂಬ ಇಬ್ಬರು ಕಾರ್ಯಕರ್ತರಿಗೆ ೨೦೧೨ ರಲ್ಲಿ ಪೊಲೀಸ್ ವಾಹನದ ಮೇಲೆ ಬಾಂಬ್ ಎಸೆದ ಪ್ರಕರಣದಲ್ಲಿ ೧೦ ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕೊಲೆ ಯತ್ನ ಮತ್ತು ಸ್ಫೋಟಕ ಕಾಯ್ದೆಯಡಿ ಅಪರಾಧಗಳಿಗೆ ನ್ಯಾಯಾಲಯವು ಇವರಿಬ್ಬರನ್ನು ದೋಷಿ ಎಂದು ತೀರ್ಪು ನೀಡಿದೆ. ಇಬ್ಬರಿಗೂ ತಲಾ ಎರಡೂವರೆ ಲಕ್ಷ ರೂಪಾಯಿ ದಂಡವನ್ನು ಸಹ ವಿಧಿಸಲಾಗಿದೆ. ದಂಡವನ್ನು ಪಾವತಿಸದಿದ್ದರೆ ಅವರಿಗೆ ಮತ್ತೊಂದು ವರ್ಷದ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ.
೧. ನಿಷಾದ್ ಮತ್ತು ನಂದಕುಮಾರ್ ಇಬ್ಬರೂ ಮಾಕಪದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ಎಂಬ ಯುವ ಸಂಘಟನೆಯ ಸದಸ್ಯರಾಗಿದ್ದಾರೆ. ನಿಷಾದ್ ಪಯ್ಯನೂರ್ ನಗರಸಭೆಯ ಹಿಂದಿನ ಅವಧಿಯ ಸದಸ್ಯರೂ ಆಗಿದ್ದಾರೆ.
೨. ಆಗಸ್ಟ್ ೧, ೨೦೧೨ ರಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕಾರ್ಯಕರ್ತ ಅರಿಯಿಲ್ ಶುಕ್ಕೂರ್ ಅವರ ಕೊಲೆ ಪ್ರಕರಣದಲ್ಲಿ ಮಾಕಪದ ಅಂದಿನ ಜಿಲ್ಲಾ ಕಾರ್ಯದರ್ಶಿ ಪಿ. ಜಯರಾಜನ್ ಅವರನ್ನು ಬಂಧಿಸಿದ ನಂತರ ಈ ಘಟನೆ ಸಂಭವಿಸಿತ್ತು. ಆ ಸಮಯದಲ್ಲಿ ಈ ಇಬ್ಬರೂ ಪೊಲೀಸರ ವಾಹನದ ಮೇಲೆ ಬಾಂಬ್ ಎಸೆದಿದ್ದರು. ಅದೃಷ್ಟವಶಾತ್, ಬಾಂಬ್ಗಳು ಸ್ಫೋಟಗೊಳ್ಳಲಿಲ್ಲ ಮತ್ತು ಯಾವುದೇ ಜೀವಹಾನಿ ಸಂಭವಿಸಲಿಲ್ಲ.
ಸಂಪಾದಕೀಯ ನಿಲುವುಈಗ ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷವು ಒಂದು ರಾಜಕೀಯ ಪಕ್ಷವಲ್ಲ, ಬದಲಿಗೆ ದೇಶದ್ರೋಹಿ, ಭಯೋತ್ಪಾದಕ ಮತ್ತು ನಕ್ಸಲ್ ಚಟುವಟಿಕೆಗಳನ್ನು ನಡೆಸುವ ಪಕ್ಷವಾಗಿರುವುದರಿಂದ, ಅದರ ಮೇಲೆ ನಿಷೇಧ ಹೇರುವುದು ಸೂಕ್ತವಾಗಿದೆ! |
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!