೨೦೧೨ ರಲ್ಲಿ ಪೊಲೀಸ್ ವಾಹನದ ಮೇಲೆ ಬಾಂಬ್ ಎಸೆದ ಪ್ರಕರಣ

ತಿರುವನಂತಪುರಂ (ಕೇರಳ) – ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನೂರ್ ನಗರಸಭೆ ಚುನಾವಣೆಯ ಹಾಲಿ ಅಭ್ಯರ್ಥಿಗಳಾಗಿರುವ ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ (ಮಾಕಪ) ವಿ.ಕೆ. ನಿಷಾದ್ ಮತ್ತು ಟಿ.ಸಿ.ವಿ. ನಂದಕುಮಾರ್ ಎಂಬ ಇಬ್ಬರು ಕಾರ್ಯಕರ್ತರಿಗೆ ೨೦೧೨ ರಲ್ಲಿ ಪೊಲೀಸ್ ವಾಹನದ ಮೇಲೆ ಬಾಂಬ್ ಎಸೆದ ಪ್ರಕರಣದಲ್ಲಿ ೧೦ ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕೊಲೆ ಯತ್ನ ಮತ್ತು ಸ್ಫೋಟಕ ಕಾಯ್ದೆಯಡಿ ಅಪರಾಧಗಳಿಗೆ ನ್ಯಾಯಾಲಯವು ಇವರಿಬ್ಬರನ್ನು ದೋಷಿ ಎಂದು ತೀರ್ಪು ನೀಡಿದೆ. ಇಬ್ಬರಿಗೂ ತಲಾ ಎರಡೂವರೆ ಲಕ್ಷ ರೂಪಾಯಿ ದಂಡವನ್ನು ಸಹ ವಿಧಿಸಲಾಗಿದೆ. ದಂಡವನ್ನು ಪಾವತಿಸದಿದ್ದರೆ ಅವರಿಗೆ ಮತ್ತೊಂದು ವರ್ಷದ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ.
೧. ನಿಷಾದ್ ಮತ್ತು ನಂದಕುಮಾರ್ ಇಬ್ಬರೂ ಮಾಕಪದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ಎಂಬ ಯುವ ಸಂಘಟನೆಯ ಸದಸ್ಯರಾಗಿದ್ದಾರೆ. ನಿಷಾದ್ ಪಯ್ಯನೂರ್ ನಗರಸಭೆಯ ಹಿಂದಿನ ಅವಧಿಯ ಸದಸ್ಯರೂ ಆಗಿದ್ದಾರೆ.
೨. ಆಗಸ್ಟ್ ೧, ೨೦೧೨ ರಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕಾರ್ಯಕರ್ತ ಅರಿಯಿಲ್ ಶುಕ್ಕೂರ್ ಅವರ ಕೊಲೆ ಪ್ರಕರಣದಲ್ಲಿ ಮಾಕಪದ ಅಂದಿನ ಜಿಲ್ಲಾ ಕಾರ್ಯದರ್ಶಿ ಪಿ. ಜಯರಾಜನ್ ಅವರನ್ನು ಬಂಧಿಸಿದ ನಂತರ ಈ ಘಟನೆ ಸಂಭವಿಸಿತ್ತು. ಆ ಸಮಯದಲ್ಲಿ ಈ ಇಬ್ಬರೂ ಪೊಲೀಸರ ವಾಹನದ ಮೇಲೆ ಬಾಂಬ್ ಎಸೆದಿದ್ದರು. ಅದೃಷ್ಟವಶಾತ್, ಬಾಂಬ್ಗಳು ಸ್ಫೋಟಗೊಳ್ಳಲಿಲ್ಲ ಮತ್ತು ಯಾವುದೇ ಜೀವಹಾನಿ ಸಂಭವಿಸಲಿಲ್ಲ.
ಸಂಪಾದಕೀಯ ನಿಲುವುಈಗ ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷವು ಒಂದು ರಾಜಕೀಯ ಪಕ್ಷವಲ್ಲ, ಬದಲಿಗೆ ದೇಶದ್ರೋಹಿ, ಭಯೋತ್ಪಾದಕ ಮತ್ತು ನಕ್ಸಲ್ ಚಟುವಟಿಕೆಗಳನ್ನು ನಡೆಸುವ ಪಕ್ಷವಾಗಿರುವುದರಿಂದ, ಅದರ ಮೇಲೆ ನಿಷೇಧ ಹೇರುವುದು ಸೂಕ್ತವಾಗಿದೆ! |
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)