
ಶ್ರೀನಗರ (ಜಮ್ಮು-ಕಾಶ್ಮೀರ) – ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಿದೆ, ಎಂದು ಜಮ್ಮು-ಕಾಶ್ಮೀರದ ಉಚ್ಚ ನ್ಯಾಯಾಲಯವು ಒಂದು ಅರ್ಜಿಯ ವಿಚಾರಣೆ ವೇಳೆ ತೀರ್ಪು ನೀಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಿರುವುದರಿಂದ, ನಿಯಂತ್ರಣ ರೇಖೆಯ ಮೂಲಕ ಜಮ್ಮು-ಕಾಶ್ಮೀರ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನಡುವೆ ನಡೆಯುವ ಯಾವುದೇ ವ್ಯಾಪಾರವನ್ನು ಅಂತರ-ರಾಜ್ಯ ವ್ಯಾಪಾರ ಎಂದು ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.
ಏನಿದು ಪ್ರಕರಣ?
ಶ್ರೀನಗರದ ರಾಜ್ಯ ಸರಕು ಮತ್ತು ಸೇವಾ ತೆರಿಗೆ ಅಧೀಕ್ಷಕರು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಜಮ್ಮು-ಕಾಶ್ಮೀರದ ನಡುವೆ ವ್ಯಾಪಾರ ಮಾಡುವ ವ್ಯಾಪಾರಿಗಳಿಗೆ ಕಾರಣ ಕೇಳಿ ನೋಟಿಸ್ಗಳನ್ನು ಜಾರಿ ಮಾಡಿದ್ದರು. ಅದರ ಅಡಿಯಲ್ಲಿ ವ್ಯಾಪಾರಿಗಳಿಗೆ ೨೦೧೭ ರಿಂದ ೨೦೧೯ ರವರೆಗೆ ಗಡಿಯ ಮೂಲಕ ಮಾಡಿದ ಸರಕುಗಳ ಒಳಬರುವಿಕೆ ಮತ್ತು ಹೊರಹೋಗುವಿಕೆಗಾಗಿ ತೆರಿಗೆ ಪಾವತಿಸಲು ಕೇಳಲಾಗಿತ್ತು. ಈ ನೋಟಿಸ್ಗಳನ್ನು ಪ್ರಶ್ನಿಸಿ ವ್ಯಾಪಾರಿಗಳು ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಮೇಲೆ ನ್ಯಾಯಾಲಯವು ಮೇಲಿನ ತೀರ್ಪನ್ನು ನೀಡಿದೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ