
ಇಸ್ಲಾಮಾಬಾದ್ (ಪಾಕಿಸ್ತಾನ) – ಇಮ್ರಾನ್ ಖಾನ್ ಅವರ ಸಹೋದರಿಯರು ಭಾರತೀಯ ಮಾಧ್ಯಮಗಳಿಗೆ ಸಂದರ್ಶನ ನೀಡಿದಕ್ಕೆ ಪಾಕಿಸ್ತಾನದ ಮಾಹಿತಿ ಸಚಿವ ಅತ್ತಾವುಲ್ಲಾ ತರಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತೀಯ ಸುದ್ದಿವಾಹಿನಿಗೆ ಹೋಗಿ ಪಾಕಿಸ್ತಾನವನ್ನು ಅವಮಾನಿಸುವುದು ಅತ್ಯಂತ ನಾಚಿಕೆಗೇಡಿನ ಸಂಗತಿ, ಎಂದು ಅವರು ಹೇಳಿದ್ದಾರೆ.
ಕಳೆದ ವಾರ, ಇಮ್ರಾನ್ ಖಾನ್ ಅವರ ಸಹೋದರಿಯರಾದ ಅಲೀಮಾ ಖಾನ್, ಡಾ. ಉಜ್ಮಾ ಖಾನ್ ಮತ್ತು ನುರೀನ್ ಖಾನ್ ಅವರು ಅಡಿಯಾಲಾ ಜೈಲಿನ ಹೊರಗೆ ಪ್ರತಿಭಟನೆ ನಡೆಸಿದ್ದರು. ಆ ಸಂದರ್ಭದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಇಮ್ರಾನ್ ಖಾನ್ ಅವರ ‘ಪಿಟಿಐ’ (ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್) ಪಕ್ಷದ ನಿಲುವು ಪಾಕಿಸ್ತಾನ ವಿರೋಧಿಯಾಗಿರುವುದರಿಂದ ಭಾರತೀಯ ಮಾಧ್ಯಮಗಳು ಅವರಿಗೆ ವೇದಿಕೆ ನೀಡುತ್ತಿವೆ ಎಂದು ತರಾರ್ ಹೇಳಿದ್ದಾರೆ. ಇಮ್ರಾನ್ ಖಾನ್ ಅವರ ಆರೋಗ್ಯದ ಕುರಿತು ವಿದೇಶಗಳಲ್ಲಿ ಹರಡಿರುವ ಹೇಳಿಕೆಗಳು ಕೇವಲ ರಾಜಕೀಯ ಪ್ರಚಾರ ಮಾತ್ರ. ಅವರು ಜೈಲಿನಲ್ಲಿ ವಿಶೇಷ ಸೌಲಭ್ಯಗಳೊಂದಿಗೆ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ತರಾರ್ ಹೇಳಿದ್ದಾರೆ.
ಸಂಪಾದಕೀಯ ನಿಲುವುಪಾಕಿಸ್ತಾನದ ಭಾರತ ವಿರೋಧಿ ದ್ವೇಷ ತಿಳಿಯಿರಿ! |
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಸ್ವದೇಶವೇ ಸರ್ವಸ್ವ !
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine