ಉತ್ತರ ಪ್ರದೇಶದಲ್ಲಿ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನುಸುಳುಕೋರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ! – UP to Act Against Infiltrators

ಅಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ನಿರ್ದೇಶನ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಕಾನೂನುಬಾಹಿರವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನುಸುಳುಕೋರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ 17 ನಗರಸಭೆಗಳಿಗೆ ತಮ್ಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಎಲ್ಲಾ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ನುಸುಳುಕೋರರು ಪಟ್ಟಿಯನ್ನು ಕೂಡಲೇ ಸಿದ್ಧಪಡಿಸುವಂತೆ ಮತ್ತು ಅಧಿಕಾರಿಗಳಿಗೆ ಬಂಧನ ಕೇಂದ್ರಗಳನ್ನು (ಡಿಟೆನ್ಷನ್ ಸೆಂಟರ್) ಸ್ಥಾಪಿಸುವಂತೆ ನಿರ್ದೇಶನ ನೀಡಿದ್ದಾರೆ.

1. ನುಸುಳುಕೋರರನ್ನು ಗುರುತಿಸಲು ಮತ್ತು ಅವರನ್ನು ಹೊರಹಾಕುವ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರನ್ನು ಈ ಬಂಧನ ಕೇಂದ್ರಗಳಲ್ಲಿ ಇರಿಸಲು ನಿರ್ಧರಿಸಲಾಗಿದೆ.

2. ಪೊಲೀಸ್ ಕಮಿಷನರ್ ಮತ್ತು ಪೊಲೀಸ್ ಮಹಾನಿರೀಕ್ಷಕರಿಗೆ ಮೊದಲ ಹಂತದಲ್ಲೇ ಬಂಧನ ಕೇಂದ್ರಗಳನ್ನು ಸ್ಥಾಪಿಸುವಂತೆ ಸೂಚಿಸಲಾಗಿದೆ.

3. ಮಾನ್ಯ ದಾಖಲೆಗಳಿಲ್ಲದೆ ರಾಜ್ಯದಲ್ಲಿ ವಾಸಿಸುತ್ತಿರುವ ವಿದೇಶಿ ನಾಗರಿಕರನ್ನು ಈ ಕೇಂದ್ರಗಳಲ್ಲಿ ಬಂಧಿಸಲಾಗುವುದು.

ಸಂಪಾದಕೀಯ ನಿಲುವು

ನುಸುಳುವಿಕೆಗೆ ಹೊಣೆಗಾರರಾಗಿದ್ದ ಅಧಿಕಾರಿಗಳನ್ನು ಸಹ ಜೀವಾವಧಿ ಶಿಕ್ಷೆ ವಿಧಿಸಿ !