ಮತಾಂತರಗೊಂಡ ಬಳಿಕವೂ ಸಂಬಂಧಿತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ಮುಂದುವರಿಸುವುದು ಸಂವಿಧಾಕ್ಕೆ ಮಾಡುವ ವಂಚನೆ ! – ಅಲಹಾಬಾದ ಉಚ್ಚ ನ್ಯಾಯಾಲಯ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಮತಾಂತರ ಮಾಡಿದ ನಂತರವೂ ಪರಿಶಿಷ್ಟ ಜಾತಿಯ ಸ್ಥಾನಮಾನವನ್ನು ಮುಂದುವರಿಸುವುದು ಸಂವಿಧಾನಕ್ಕೆ ಮಾಡುವ ವಂಚನೆಯಾಗಿದೆ ಎಂದು ಅಲಹಾಬಾದ ಉಚ್ಚ ನ್ಯಾಯಾಲಯವು ಮಹತ್ವದ ತೀರ್ಪನ್ನು ನೀಡಿದೆ. ‘ಇತರ ಧರ್ಮಕ್ಕೆ (ಕ್ರೈಸ್ತ ಧರ್ಮಕ್ಕೆ) ಮತಾಂತರಗೊಳ್ಳುವ ಜನರು ಪರಿಶಿಷ್ಟ ಜಾತಿಯ ಸ್ಥಾನಮಾನ ಪಡೆಯದಂತೆ ಎಚ್ಚರಿಕೆ ವಹಿಸಿ’ ಎಂದು ಉಚ್ಚ ನ್ಯಾಯಾಲಯವು ಉತ್ತರ ಪ್ರದೇಶ ಸರಕಾರಕ್ಕೆ ಸೂಚನೆಯನ್ನೂ ನೀಡಿದೆ. ಉತ್ತರ ಪ್ರದೇಶದ ಮಹಾರಾಜಗಂಜದ ಜಿತೇಂದ್ರ ಸಹಾನಿ ಎಂಬಾತ ಹಿಂದೂ ದೇವತೆಗಳ ಅವಮಾನ ಮಾಡಿದ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಪ್ರವೀಣ ಕುಮಾರ ಗಿರಿ ಅವರು ಈ ತೀರ್ಪು ನೀಡಿದರು.

1. ಅಲ್ಪಸಂಖ್ಯಾತರು ಮತ್ತು ಪರಿಶಿಷ್ಟ ಜಾತಿಗಳಿಗೆ ನೀ ಲಾಗುವ ಸ್ಥಾನಮಾನ ಹಾಗೂ ಅವುಗಳ ನಡುವಿನ ವ್ಯತ್ಯಾಸವನ್ನು ಎಲ್ಲರಿಗೂ ಸ್ಪಷ್ಟಪಡಿಸುವಂತೆ ಉಚ್ಚ ನ್ಯಾಯಾಲಯವು ಉತ್ತರ ಪ್ರದೇಶದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದೆ.

2. ಹಿಂದೂ, ಸಿಖ್ ಅಥವಾ ಬೌದ್ಧರನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮದ ವ್ಯಕ್ತಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನವನ್ನು ನೀಡಲು ಸಾಧ್ಯವಿಲ್ಲ ಎಂದೂ ಉಚ್ಚ ನ್ಯಾಯಾಲಯವು ಸ್ಪಷ್ಟಪಡಿಸಿದೆ.

ಸಹಾನಿ ವಿರುದ್ಧ ಕೂಲಂಕಷ ತನಿಖೆಗೆ ಆದೇಶ

ಜಿತೇಂದ್ರ ಸಹಾನಿಯು ಹಿಂದೂ ದೇವತೆಗಳನ್ನು ಅವಮಾನಿಸಿದ್ದನು. ಸಹಾನಿಯು ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತನ್ನ ಧರ್ಮವನ್ನು ‘ಹಿಂದೂ ಧರ್ಮ’ ಎಂದು ಉಲ್ಲೇಖಿಸಿದ್ದನು. ಆದರೆ, ವಾಸ್ತವದಲ್ಲಿ ಅವನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾನೆ ಎಂಬುದು ಉಚ್ಚ ನ್ಯಾಯಾಲಯದ ಗಮನಕ್ಕೆ ಬಂದಿತು. ಆ ಸಮಯದಲ್ಲಿ ಉಚ್ಚ ನ್ಯಾಯಾಲಯವು, ‘ಸಹಾನಿಯು ಕ್ರೈಸ್ತ ಧರ್ಮವನ್ನು ಸ್ವೀಕರಿಸಿದ್ದಾನೆಯೇ ? ಎಂದು ಖಚಿತಪಡಿಸಿಕೊಳ್ಳಳು 3 ತಿಂಗಳೊಳಗೆ ಕೂಲಂಕಷ ತನಿಖೆ ನಡೆಸಬೇಕು’ ಎಂದು ಮಹಾರಾಜಗಂಜದ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿತು. ಹಾಗೆಯೇ, ಅವನು ಮತಾಂತರ ಮಾಡಿ ಉಚ್ಚ ನ್ಯಾಯಾಲಯಕ್ಕೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದರೆ, ಅವನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಚ್ಚ ನ್ಯಾಯಾಲಯವು ಆದೇಶಿಸಿದೆ.

ಸಂಪಾದಕೀಯ ನಿಲುವು

ಇಂತಹ ವಂಚನೆ ಮಾಡಿ ಪರಿಶಿಷ್ಟ ಜಾತಿಗಳಿಗೆ ನೀಡಲಾಗುವ ಸೌಲಭ್ಯಗಳನ್ನು ಕಬಳಿಸುವವರಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಜನರು ಅಪೇಕ್ಷಿಸುತ್ತಾರೆ!