
ಸಿಂದಗಿ : ವಕ್ಫ್ ಮಂಡಳಿಯು ಬಲವಂತವಾಗಿ ವಶಪಡಿಸಿಕೊಂಡಿದ್ದ ಸಿಂದಗಿ ಗುರುಬಸವ ವಿರಕ್ತ ಮಠಕ್ಕೆ ಸೇರಿದ ಕೋಟ್ಯಂತರ ರೂಪಾಯಿ ಬೆಲೆಯ 1.30 ಎಕರೆ ಭೂಮಿಯನ್ನು 51 ವರ್ಷಗಳ ನಿರಂತರ ಹೋರಾಟದ ನಂತರ ಕೊನೆಗೂ ಮಠಕ್ಕೆ ಮರಳಿ ದೊರೆತಿದೆ. ಗುರುಬಸವ ವಿರಕ್ತ ಮಠ ಸೇವಾ ಸಮಿತಿಯ ಕಾರ್ಯದರ್ಶಿ ನಿಂಗಪ್ಪ ಗುರುಬಸವಪ್ಪ ಪಟ್ಟಣಶೆಟ್ಟಿ ಅವರು ಪತ್ರಕರ್ತರೊಂದಿಗೆ ಮಾತನಾಡುವಾಗ ಈ ಆನಂದದ ಸುದ್ದಿಯನ್ನು ತಿಳಿಸಿದರು.
1. ವಿಜಯಪುರ ಜಿಲ್ಲೆಯ ಸಿಂದಗಿ ನಗರದಲ್ಲಿ ಸರ್ವೇ ನಂ. 1020 ರಲ್ಲಿರುವ 1.28 ಎಕರೆ ವಿರಕ್ತ ಮಠದ ಭೂಮಿಯನ್ನು ಕಂದಾಯ ದಾಖಲೆಗಳಲ್ಲಿ (ಪಹಣಿ/ಆರ್.ಟಿ.ಸಿ.) ಕರ್ನಾಟಕ ಸುನ್ನಿ ವಕ್ಫ್ ಮಂಡಳಿಯ ಆಸ್ತಿ ಎಂದು ನಮೂದಿಸಲಾಗಿತ್ತು.
2. ಈ ಹಿಂದೆ ಮಠದ ಪೀಠಾಧಿಪತಿಗಳಾಗಿದ್ದ ಸಿದ್ಧಲಿಂಗಯ್ಯ ಸ್ವಾಮೀಜಿಗಳ ಕಾಲದಲ್ಲಿ ಪಹಣಿಯ 11ನೇ ಕಾಲಂ ಖಾಲಿಯಾಗಿತ್ತು; ಆದರೆ, 2018-2019 ರ ಅವಧಿಯಲ್ಲಿ ಈ ಭೂಮಿಯನ್ನು ‘ಕಬ್ರಸ್ತಾನ್ ವಕ್ಫ್ ಬೋರ್ಡ್’ ಎಂದು ಬದಲಾಯಿಸಲಾಗಿತ್ತು. ಇದು ಕಾನೂನುಬಾಹಿರವೆಂದು ತಿಳಿದ ಕೂಡಲೇ ಭಕ್ತರು ಅಂದಿನಿಂದ ಹೋರಾಟವನ್ನು ಆರಂಭಿಸಿದರು. ಈ ಕುರಿತು ಹಲವು ಬಾರಿ ಪ್ರತಿಭಟನೆಗಳನ್ನು ಸಹ ನಡೆಸಲಾಗಿತ್ತು.
3. ವಿರಕ್ತ ಮಠದ ಆಸ್ತಿಯನ್ನು ವಕ್ಫ್ ಬೋರ್ಡ್ ನಿಂದ ಮುಕ್ತಗೊಳಿಸಲು 11 ತಿಂಗಳ ಕಾಲ ವಾದ-ಪ್ರತಿವಾದಗಳು ನಡೆದವು ಮತ್ತು ಅಂತಿಮವಾಗಿ ಶ್ರೀ ಮಠದ ಆಸ್ತಿಯು ಮರಳಿ ಮಠಕ್ಕೆ ದೊರಕಿದೆ. ಈ ಆಸ್ತಿಗೂ ವಕ್ಫ್ ಬೋರ್ಡ್ಗೂ ಯಾವುದೇ ಸಂಬಂಧವಿಲ್ಲವೆಂದು ಮಾನ್ಯ ನ್ಯಾಯಾಲಯವು ಆದೇಶ ನೀಡಿದೆ.
4.ಸಿಂದಗಿ ಮಠವು ಕೇವಲ ಸಾಮಾನ್ಯ ಮಠವಲ್ಲ, ಶಿಕ್ಷಣ ಕ್ಷೇತ್ರದಲ್ಲಿ ಮಠದ ಕೊಡುಗೆ ಅತ್ಯಂತ ದೊಡ್ಡದಾಗಿದೆ. ಸುತ್ತ-ಮುತ್ತಲಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಮಠವು ಶಾಲಾ-ಕಾಲೇಜುಗಳನ್ನು ಸ್ಥಾಪಿಸಿದೆ. ಬ್ಯಾಡಗಿಯ ಶ್ರೀ ಗುರು ಕುಮಾರೇಶ್ವರ ಧಾರ್ಮಿಕ ಪಾಠಶಾಲೆ ಸೇರಿದಂತೆ ಅನೇಕ ಶಿಕ್ಷಣ ಸಂಸ್ಥೆಗಳು ಮಠದ ಆಡಳಿತದ ಅಡಿಯಲ್ಲಿ ಬರುತ್ತವೆ. ಈ ಸಂಸ್ಥೆಗಳಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ.
ಸಂಪಾದಕೀಯ ನಿಲುವುದೇಶದಲ್ಲಿ ಇಂತಹ ಸಹಸ್ರಾರು ಎಕರೆ ಭೂಮಿಯನ್ನು ವಕ್ಫ್ ಮಂಡಳಿಯು ಕಾನೂನುಬಾಹಿರವಾಗಿ ವಶಪಡಿಸಿಕೊಂಡಿದೆ. ಅವುಗಳನ್ನು ಬಿಡಿಸಿಕೊಳ್ಳಲು ಇನ್ನೂ ಎಷ್ಟು ವರ್ಷಗಳ ಕಾಲ ಹೋರಾಟ ನಡೆಸಬೇಕಾಗುವುದೋ. ಈ ಪರಿಸ್ಥಿತಿಯನ್ನು ಗಮನಿಸಿದರೆ, ವಕ್ಫ್ ಮಂಡಳಿಯನ್ನು ವಿಸರ್ಜಿಸಿ, ಭೂಮಿಯನ್ನು ಸಂಬಂಧಪಟ್ಟವರಿಗೆ ಮರಳಿ ನೀಡುವುದು ಅತ್ಯವಶ್ಯಕವಾಗಿದೆ. |
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!