ಬಾಬರಿ ಮಸೀದಿ ಪ್ರಕರಣದಲ್ಲಿ ಶಾಸಕ ಹುಮಾಯೂ ಕಬೀರ್ ರವರ ಹಸ್ತಕ್ಷೇಪಕ್ಕೆ ಕೊಲಕಾತಾ ಉಚ್ಚ ನ್ಯಾಯಾಲಯದ ನಿರಾಕರಣೆ! Calcutta High Court Babri Masjid

ಇಂದು ಮಸೀದಿಯ ಶಿಲಾನ್ಯಾಸ ನಡೆಯಲಿದೆ

ಕೋಲಕಾತಾ (ಬಂಗಾಳ) – ಬಂಗಾಳದ ತೃಣಮೂಲ ಕಾಂಗ್ರೆಸ್ನಿಂದ ಅಮಾನತುಗೊಂಡಿರುವ ಶಾಸಕ ಹುಮಾಯೂ ಕಬೀರ್ ಅವರು, ಮುರ್ಶಿದಾಬಾದ್ ಜಿಲ್ಲೆಯ ಬೆಲ್ಡಾಂಗದಲ್ಲಿ ಡಿಸೆಂಬರ್ 6 ರಂದು ಬಾಬರಿ ಮಸೀದಿಗೆ ಶಿಲಾನ್ಯಾಸ ಮಾಡುವ ಪ್ರಚೋದನಕಾರಿ ಘೋಷಣೆಯನ್ನು ಮಾಡಿದ್ದಾರೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದಲ್ಲಿ ದಾಖಲಿಸಲಾದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಕೊಲಕಾತಾ ಉಚ್ಚ ನ್ಯಾಯಾಲಯವು ನಿರಾಕರಿಸಿದೆ. ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರಕಾರದ ಕೆಲಸ ಎಂದು ಹೇಳಿ ನ್ಯಾಯಾಲಯವು ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದೆ.

ಪರಿಸರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ರಾಜ್ಯ ಆಡಳಿತವು ಸಾಕಷ್ಟು ಪೊಲೀಸ್ ಭದ್ರತೆಯನ್ನು ನಿಯೋಜಿಸಿದೆ ಎಂದು ಸರಕಾರವು ನ್ಯಾಯಾಲಯಕ್ಕೆ ತಿಳಿಸಿತು. ಆ ಪ್ರದೇಶದಲ್ಲಿ ಈಗಾಗಲೇ ಕೇಂದ್ರ ಭದ್ರತಾ ಪಡೆಗಳ 19 ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಕೇಂದ್ರ ಸರಕಾರವೂ ತಿಳಿಸಿದೆ. ಹುಮಾಯೂ ಕಬೀರ್ ಅವರು ರಾಜಕೀಯ ಪಕ್ಷ ಸ್ಥಾಪನೆ ಮಾಡಲಿದ್ದಾರೆ.
ಹುಮಾಯೂ ಕಬೀರ್ ಅವರು ಶಿಸ್ತು ಉಲ್ಲಂಘನೆಯ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ನಿಂದ ಅಮಾನತುಗೊಂಡ ನಂತರ, ಸ್ವತಂತ್ರ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.