|

ಮುಂಬಯಿ – ಗೊಂಡಿಯಾ ಜಿಲ್ಲೆಯ ಗೌಸಿಯಾ ಮಸೀದಿಯು ನಮಾಜಿಗೆ ಧ್ವನಿವರ್ಧಕ ಬಳಸಲು ಅರ್ಜಿಯ ಮೂಲಕ ಅನುಮತಿ ಕೇಳಿತ್ತು; ಆದರೆ ಆ ಅನುಮತಿಯನ್ನು ಮುಂಬಯಿ ಉಚ್ಚ ನ್ಯಾಯಾಲಯದ ನಾಗಪುರ ವಿಭಾಗವು ತಿರಸ್ಕರಿಸಿದೆ. ‘ಯಾವುದೇ ಧರ್ಮವು ಶಾಂತಿಯನ್ನು ಭಂಗಗೊಳಿಸಿ ಪೂಜೆಯನ್ನು ಕಲಿಸುವುದಿಲ್ಲ. ಯಾವುದೇ ಧರ್ಮವು ಧ್ವನಿವರ್ಧಕ ಅಥವಾ ಡ್ರಮ್ ಬಾರಿಸಿ ಪ್ರಾರ್ಥನೆ ಮಾಡಲು ಅನುಮತಿ ನೀಡಿಲ್ಲ’ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ಅನಿಲ್ ಪನ್ಸಾರೆ ಮತ್ತು ರಾಜ್ ವಾಕೋಡೆ ಅವರ ವಿಭಾಗೀಯ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು.
ಅರ್ಜಿದಾರರ ಮನವಿಯನ್ನು ತಿರಸ್ಕರಿಸುವಾಗ ವಿಭಾಗೀಯ ಪೀಠವು ಸ್ಪಷ್ಟಪಡಿಸಿದೆ…
೧. ಧಾರ್ಮಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕದ ಬಳಕೆ ಕಡ್ಡಾಯ ಅಥವಾ ಅಗತ್ಯ ಎಂಬುದನ್ನು ಸಾಬೀತುಪಡಿಸಲು ಅರ್ಜಿದಾರರು ಯಾವುದೇ ದಾಖಲೆಗಳನ್ನು ಸಲ್ಲಿಸಲು ಸಾಧ್ಯವಾಗಲಿಲ್ಲ.
೨. ಶಬ್ದ ಮಾಲಿನ್ಯದ ಪ್ರಶ್ನೆ ಪದೇ ಪದೇ ಉದ್ಭವಿಸುತ್ತಿದೆ. ಈ ಪರಿಸ್ಥಿತಿ ಗಂಭೀರವಾಗಿರುವುದರಿಂದ ಮಹಾರಾಷ್ಟ್ರ ಸರಕಾರವು ಈ ಸಮಸ್ಯೆಗೆ ಪರಿಣಾಮಕಾರಿ ಪರಿಹಾರ ನೀಡಬೇಕು.
೩. ನ್ಯಾಯಾಲಯವು ‘ಶಬ್ದ ಮಾಲಿನ್ಯವು ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯವಾಗಿದೆ. ಶಬ್ದ ಮಾಲಿನ್ಯದಿಂದ ದೇಹದಲ್ಲಿ ಹಾನಿಕಾರಕ ರಾಸಾಯನಿಕಗಳು ಹೆಚ್ಚಾಗುತ್ತವೆ. ಇದರಿಂದ ಹೃದ್ರೋಗ, ಅಧಿಕ ರಕ್ತದೊತ್ತಡ, ಮಾನಸಿಕ ಒತ್ತಡ, ಆಕ್ರಮಣಶೀಲತೆ, ಆಯಾಸ ಮತ್ತು ಇತರ ಕಾಯಿಲೆಗಳು ಬರಬಹುದು’ ಎಂದು ಹೇಳಿದೆ.
೪. ಧಾರ್ಮಿಕ ಸ್ಥಳಗಳ ಬಳಿ ನಿಯಮಗಳನ್ನು ಉಲ್ಲಂಘಿಸಿ ಭಜನೆ ಮತ್ತು ‘ಅಜಾನ್’ (ಪ್ರಾರ್ಥನೆಗೆ ಕರೆಯುವುದು) ಆಯೋಜಿಸಲಾಗುತ್ತದೆ. ಇದು ಕಾನೂನಿನ ನೇರ ಉಲ್ಲಂಘನೆಯಾಗಿದ್ದು, ಅದನ್ನು ನಿಯಂತ್ರಿಸುವುದು ಅಗತ್ಯವಾಗಿದೆ.
೫. ನ್ಯಾಯಾಲಯವು ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಮತ್ತು ಶಬ್ದ ಮಾಲಿನ್ಯದಿಂದ ಮುಕ್ತವಾಗಿರುವ ನಾಗರಿಕರ ಹಕ್ಕಿನ ನಡುವೆ ಸಮತೋಲನ ಸಾಧಿಸಲು ಪ್ರಯತ್ನಿಸಿತು. ಸರ್ವೋಚ್ಚ ನ್ಯಾಯಾಲಯದ ಶಬ್ದ ಮಾಲಿನ್ಯದ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಪರಿಣಾಮಕಾರಿ ಪರಿಹಾರಗಳನ್ನು ಕಂಡುಕೊಳ್ಳುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
೬. ನಿಯಮಗಳು ಕೇವಲ ಕಾಗದದ ಮೇಲೆ ಮಾತ್ರ ಉಳಿಯುತ್ತವೆ. ಅವುಗಳನ್ನು ಪಾಲಿಸದಿದ್ದಲ್ಲಿ ದಂಡಾತ್ಮಕ ಕ್ರಮ ತೆಗೆದುಕೊಳ್ಳಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
೭. ವಿಭಾಗೀಯ ಪೀಠವು ತೀರ್ಪಿನಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಉಲ್ಲೇಖಿಸಿತು. ಸರ್ವೋಚ್ಚ ನ್ಯಾಯಾಲಯದ ೨೦೦೫ ರ ಐತಿಹಾಸಿಕ ತೀರ್ಪಿನ ಉಲ್ಲೇಖ ನೀಡಿದ ನ್ಯಾಯಾಲಯವು, ‘ಕಲಂ ೨೧ ರ ಅಡಿಯಲ್ಲಿ ಜೀವಿಸುವ ಹಕ್ಕು ಕೇವಲ ಜೀವಿಸುವ ಹಕ್ಕು ಮಾತ್ರವಲ್ಲ, ಗೌರವದಿಂದ ಜೀವಿಸುವ ಹಕ್ಕು ಸಹ ಆಗಿದೆ’ ಎಂದು ಹೇಳಿದೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ