
ಅಯೋಧ್ಯೆ (ಉತ್ತರ ಪ್ರದೇಶ) – ರಾಷ್ಟ್ರ ಮತ್ತು ಧರ್ಮಕ್ಕೆ ವಿರುದ್ಧವಾದ ಯಾವುದೇ ಕೃತ್ಯವನ್ನು ಸಹಿಸಲಾಗದು. ಬಾಬರನ ಹೆಸರಿನಲ್ಲಿ ನಿರ್ಮಾಣ ಕಾರ್ಯ ಮಾಡುವುದು ರಾಷ್ಟ್ರಹಿತದ ವಿರೋಧವಾಗಿದೆ. ಇಂತಹ ಕೆಲಸ ಮಾಡುವವರಿಗೆ ತಕ್ಕ ಪ್ರತ್ಯುತ್ತರ ನೀಡಲು ಸಂತ ಸಮುದಾಯ ಸಿದ್ಧವಿದೆ. ಹುಮಾಯೂ ಕಬೀರ್ ಅವರನ್ನು ತತ್ಕ್ಷಣವೇ ಬಂಧಿಸಬೇಕು ಎಂದು ಅಯೋಧ್ಯೆಯ ಜಗದ್ಗುರು ಪರಮಹಂಸಾಚಾರ್ಯರು ಆಗ್ರಹಿಸಿದ್ದಾರೆ. ಬಂಗಾಳದ ತೃಣಮೂಲ ಕಾಂಗ್ರೆಸ್ಸಿನಿಂದ ಅಮಾನತುಗೊಂಡ ಶಾಸಕ ಹುಮಾಯೂ ಕಬೀರ್ ಅವರು ಮುರ್ಷಿದಾಬಾದ್ ನಲ್ಲಿ ಬಾಬರಿ ಮಸೀದಿಗೆ ಶಿಲಾನ್ಯಾಸ ಮಾಡಿ ಹಿಂದೂಗಳಿಗೆ ಬೆದರಿಕೆ ಹಾಕಿದ ಬಳಿಕ ಜಗದ್ಗುರು ಈ ರೀತಿ ಮನವಿ ಮಾಡಿದ್ದಾರೆ. ಹನುಮಾನಗಢಿಯ ಮುಖ್ಯ ಅರ್ಚಕ ರಾಜು ದಾಸ್ ಅವರೂ ಕೂಡ ಈ ಘಟನೆಯನ್ನು ಅತ್ಯಂತ ದುರದೃಷ್ಟಕರ ಎಂದು ಬಣ್ಣಿಸಿ, ದೇಶದ ಹಿಂದೂಗಳು ಜಾಗೃತರಾಗಿರಬೇಕು ಎಂದು ಕರೆ ನೀಡಿದ್ದಾರೆ.
ದಂತಧಾವನ ಕುಂಡ ಪೀಠದ ಪೀಠಾಧೀಶ್ವರ ಮಹಂತ ವಿವೇಕ ಆಚಾರ್ಯರು ಮಾತನಾಡಿ ಇನ್ನು ಮುಂದೆ ದೇಶದಲ್ಲಿ ಬಾಬರನ ಹೆಸರಿನಲ್ಲಿ ಯಾವುದೇ ನಿರ್ಮಾಣ ಕಾರ್ಯ ನಡೆಯಬಾರದು. ದೇಶವು ಪ್ರಗತಿಯ ಪಥದಲ್ಲಿದೆ ಮತ್ತು ಸನಾತನ ಸಂಸ್ಕೃತಿಯ ಗೌರವವು ವಿಶ್ವದಾದ್ಯಂತ ತಲುಪುತ್ತಿದೆ. ಇಂತಹ ಸಮಯದಲ್ಲಿ ಹುಮಾಯೂ ಕಬೀರ್ ಅವರ ಕೃತ್ಯವು ದೇಶದ ವಾತಾವರಣವನ್ನು ಕಲುಷಿತಗೊಳಿಸುವ ಪ್ರಯತ್ನವಾಗಿದೆಯೆಂದು ಹೇಳಿದರು.
ಬಾಬರನ ಹೆಸರಿನಲ್ಲಿ ಮಸೀದಿ ನಿರ್ಮಿಸಬಾರದು! – ಬಾಬರಿಯ ಮಾಜಿ ಅರ್ಜಿದಾರ ಇಕ್ಬಾಲ್ ಅನ್ಸಾರಿ
ಬಾಬರಿ ಪ್ರಕರಣದ ಮಾಜಿ ಅರ್ಜಿದಾರರಾದ ಇಕ್ಬಾಲ್ ಅನ್ಸಾರಿ ಅವರು ಈ ಘಟನೆಯು ರಾಜಕೀಯ ಪ್ರೇರಿತವಾಗಿದೆ ಎಂದು ಬಣ್ಣಿಸಿದ್ದಾರೆ. ಶ್ರೀರಾಮ ಜನ್ಮಭೂಮಿ ಮತ್ತು ಬಾಬರಿ ನಡುವೆ ಈಗ ಯಾವುದೇ ವಿವಾದ ಉಳಿದಿಲ್ಲ. ನ್ಯಾಯಾಲಯ ನೀಡಿದ ತೀರ್ಪನ್ನು ಎಲ್ಲಾ ಮುಸಲ್ಮಾನರೂ ಒಪ್ಪಿಕೊಂಡಿದ್ದಾರೆ. ಬಂಗಾಳದಲ್ಲಿ ಚುನಾವಣೆಗಳು ಸಮೀಪಿಸುತ್ತಿರುವುದರಿಂದ, ಬಾಬರನ ಹೆಸರಿನಲ್ಲಿ ಮಸೀದಿ ನಿರ್ಮಿಸುವ ಚರ್ಚೆಯನ್ನು ಮುನ್ನೆಲೆಗೆ ತರಲಾಗುತ್ತಿದೆ. ಬಾಬರನ ಹೆಸರಿನಲ್ಲಿ ಮಸೀದಿ ನಿರ್ಮಿಸಬಾರದು; ಏಕೆಂದರೆ ಅವನು ಮಾರ್ಗದರ್ಶಕ ಅಥವಾ ಉದಾತ್ತ ವ್ಯಕ್ತಿಯಾಗಿರಲಿಲ್ಲ ಎಂದು ಅವರು ತಿಳಿಸಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ