ಮತಾಂತರಕ್ಕಾಗಿ ಹಿಂದೂ ಯುವತಿ ಮೇಲೆ ಬ್ಲೇಡ್ನಿಂದ ದಾಳಿಯಾದ ಪ್ರಕರಣ

ಮಿರ್ಜಾಪುರ (ಉತ್ತರಪ್ರದೇಶ) – ಹಿಂದೂ ಯುವತಿ ಮೇಲೆ ಬ್ಲೇಡ್ನಿಂದ ದಾಳಿ ಮಾಡಿ ಪರಾರಿಯಾಗಿದ್ದ ಮುಖ್ಯ ಆರೋಪಿ ಅಬ್ದುಲ್ ಅಲಿಯಾಸ್ ಸೈಫ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಡಿಸೆಂಬರ್ 9 ರಂದು ಬೆಳಿಗ್ಗೆ ಮಹರ್ಷಿ ಘಾಟ್ ಬಳಿಯ ಗಂಗಾ ನದಿಯಲ್ಲಿ ಆತನ ಮೃತದೇಹ ತೇಲುತ್ತಿರುವುದು ಕಂಡುಬಂದಿದ್ದು ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.
ಅಬ್ದುಲ್ನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆತ ವಾಸಿಸುತ್ತಿದ್ದ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ‘ಬಂಧನವಾಗಬಹುದು’ ಎಂಬ ಭಯದಿಂದ ಆತ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. ಅಬ್ದುಲ್ ಕಳೆದ 72 ಗಂಟೆಗಳಿಂದ ಪರಾರಿಯಾಗಿದ್ದನು. ಈತ ಓರ್ವ ಹಿಂದೂ ಯುವತಿಯನ್ನು ಮತಾಂತರವಾಗುವಂತೆ ಒತ್ತಡ ಹೇರುತ್ತಿದ್ದನು. ಯುವತಿಯು ನಿರಾಕರಿಸಿದ ನಂತರ, ಆತ ಆಕೆಯ ಮನೆಗೆ ನುಗ್ಗಿ, ಆಕೆಯ ಕುತ್ತಿಗೆಯ ಮೇಲೆ ಬ್ಲೇಡ್ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದನು. ಗಾಯಗೊಂಡ ಯುವತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!