ದೆಹಲಿಯಲ್ಲಿ ಭಜನಸಂಧ್ಯಾ ಕಾರ್ಯಕ್ರಮದ ಮೇಲೆ ಕಲ್ಲು ತೂರಾಟ! : Delhi Stone Pelting

 

ನವದೆಹಲಿ – ದೆಹಲಿಯ ಪಂಡಾರಾ ರಸ್ತೆಯ ಪ್ರದೇಶದಲ್ಲಿ ಭಜನಸಂಧ್ಯಾ ಕಾರ್ಯಕ್ರಮ ನಡೆಯುತ್ತಿರುವಾಗ ಕಲ್ಲು ತೂರಾಟ ನಡೆದಿದೆ. ಪಂಡಾರಾ ರಸ್ತೆಯಲ್ಲಿರುವ ಎಸ್.ಪಿ. ಮೋನ್ ಅವರ ನಿವಾಸದಲ್ಲಿ ೩ ದಿನಗಳ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಕೊನೆಯ ದಿನ ಸಂಜೆ ‘ಭಜನಸಂಧ್ಯಾ’ ಎಂಬ ಭಜನೆಯ ಕಾರ್ಯಕ್ರಮ ನಡೆಯುತ್ತಿತ್ತು. ಕಾರ್ಯಕ್ರಮದ ಸ್ಥಳದಲ್ಲಿ ೧೦೦ ಕ್ಕಿಂತ ಹೆಚ್ಚು ಜನರು ಉಪಸ್ಥಿತರಿದ್ದರು. ಈ ಸಮಯದಲ್ಲಿ ಪೆಂಡಾಲನತ್ತ ಕಲ್ಲು ಮತ್ತು ಗಾಜುಗಳನ್ನು ಎಸೆಯಲಾಯಿತು. ಈ ಕಲ್ಲು ತೂರಾಟದಲ್ಲಿ ಕೆಲವರು ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಷಯದ ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತಲುಪಿದರು. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ಸಂಪಾದಕೀಯ ನಿಲುವು

ಹಿಂದೂ ಬಹುಸಂಖ್ಯಾತ ಭಾರತದಲ್ಲಿ ಹಿಂದೂಗಳಿಗೆ ತಮ್ಮ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದು ಕಷ್ಟಕರವಾಗಿದೆ. ಇದನ್ನು ತಡೆಯಲು ಹಿಂದೂ ಸಂಘಟನೆಯೇ ಏಕೈಕ ಉಪಾಯ!