
ನವ ದೆಹಲಿ, ಡಿಸೆಂಬರ್ 16 (ವಾರ್ತೆ.) – ಭಾರತೀಯ ಜ್ಞಾನ ಪರಂಪರೆಯಲ್ಲಿ ಮುಟ್ಟದಿರುವ ಮತ್ತು ಕೆಲವು ಅಜ್ಞಾತ ಆಯಾಮಗಳಿವೆ. ನಾವು ಪುಸ್ತಕಗಳಲ್ಲಿ ವಿವಿಧ ವಿಷಯಗಳನ್ನು ನೋಡುತ್ತೇವೆ; ಆದರೆ ಶಸ್ತ್ರಾಸ್ತ್ರಗಳಲ್ಲಿ ಏನು ವಿಜ್ಞಾನವಿದೆ, ಯುದ್ಧ ಕಲೆಯ ವಿಷಯ ಏನು ಎಂಬುದನ್ನು ನೋಡಲು ಈ ಪ್ರದರ್ಶನದ ಮೂಲಕ ಉತ್ತಮ ಅವಕಾಶ ದೊರೆತಿದೆ. ಈ ಮಾಹಿತಿ ಹಲವರಿಗೆ ತಿಳಿದಿಲ್ಲದಿರಬಹುದು. ಹಾಗಾಗಿ ಭಾರತದಲ್ಲಿ ಇಂತಹ ಪ್ರದರ್ಶನಗಳು ಎಲ್ಲಿ ನಡೆಯುತ್ತವೆಯೋ, ಅಲ್ಲಿಗೆ ಹೋಗಿ ಅದನ್ನು ನೋಡಬೇಕು. ಇದರಿಂದ ನಮ್ಮ ಜ್ಞಾನ ಹೆಚ್ಚುತ್ತದೆ ಮತ್ತು ನಮ್ಮ ಗೌರವವೂ ಹೆಚ್ಚುತ್ತದೆ. ಈ ವಿಷಯವನ್ನು ಮಕ್ಕಳ ಪಠ್ಯಕ್ರಮದಲ್ಲಿ ಸೇರಿಸಬೇಕು. ಮಕ್ಕಳಿಗೆ ಮಾತ್ರವಲ್ಲ, ಇಡೀ ಕುಟುಂಬಕ್ಕೆ ಈ ಬಗ್ಗೆ ತಿಳಿದಿರಬೇಕು. ನಾವು ರಾಮಾಯಣ-ಮಹಾಭಾರತವನ್ನು ಪಠ್ಯಕ್ರಮಗಳಲ್ಲಿ ಕಲಿಯದಿದ್ದರೆ, ತಂದೆ-ತಾಯಿ ಇಂತಹ ವಿಷಯಗಳ ಬಗ್ಗೆ ಮಾಹಿತಿ ತಿಳಿದು ಮಕ್ಕಳಿಗೆ ನೀಡಬೇಕು ಎಂದು ಭಾಜಪ ರಾಷ್ಟ್ರೀಯ ವಕ್ತಾರರಾದ ಶ್ರೀ. ಸುಧಾಂಶು ತ್ರಿವೇದಿ ಅವರು ‘ಸನಾತನ ಪ್ರಭಾತ’ದೊಂದಿಗೆ ಮಾತನಾಡುತ್ತಾ ಹೇಳಿದರು. ‘ಭಾರತ್ ಮಂಡಪಂ’ನಲ್ಲಿ ಆಯೋಜಿಸಲಾಗಿದ್ದ ಶಸ್ತ್ರಾಸ್ತ್ರ ಪ್ರದರ್ಶನವನ್ನು ವೀಕ್ಷಿಸಿದ ನಂತರ ಅವರು ‘ಸನಾತನ ಪ್ರಭಾತ’ದ ಪ್ರತಿನಿಧಿಯೊಂದಿಗೆ ಮಾತನಾಡಿದರು.
ಶ್ರೀ. ಸುಧಾಂಶು ತ್ರಿವೇದಿ ಅವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಸಂಶೋಧನಾ ಕಾರ್ಯದ ಬಗ್ಗೆ ಮಾಹಿತಿ ನೀಡುವ ಪ್ರದರ್ಶನವನ್ನು ಸಹ ಆಸಕ್ತಿಯಿಂದ ತಿಳಿದುಕೊಂಡರು ಮತ್ತು ತಮ್ಮ ಸಮಕಾಲೀನ ಅನುಭವಗಳನ್ನು ಹಂಚಿಕೊಂಡರು.
ಕೇಂದ್ರ ರಾಜ್ಯ ಸಚಿವ ಶ್ರೀಪಾದ ನಾಯ್ಕ ಅವರಿಂದ ಶಸ್ತ್ರಾಸ್ತ್ರ ಪ್ರದರ್ಶನಕ್ಕೆ ಭೇಟಿ!
ಕೇಂದ್ರ ಇಂಧನ ರಾಜ್ಯ ಸಚಿವ ಶ್ರೀ. ಶ್ರೀಪಾದ ನಾಯಿಕ ಅವರು ಪ್ರದರ್ಶನ ಕೊಠಡಿಗೆ ಭೇಟಿ ನೀಡಿದರು. ಈ ವೇಳೆ ಅವರು ರುದ್ರಾಕ್ಷಿಗಳ ಕುರಿತ ಮಾಹಿತಿಯ ಛಾಯಾಚಿತ್ರಗಳನ್ನು ತೆಗೆದುಕೊಂಡು, ಅದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಂಡರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ