
ನವ ದೆಹಲಿ – ಉತ್ತರಾಖಂಡ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಗುಜರಾತನಂತಹ ಕೆಲವು ರಾಜ್ಯಗಳಲ್ಲಿ ಲವ್ ಜಿಹಾದ್ ಮತ್ತು ಬಲವಂತದ ಮತಾಂತರವನ್ನು ತಡೆಯಲು ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇವೆ. ಅಖಿಲ ಭಾರತ ಪಸಮಾಂದಾ ಮುಸ್ಲಿಂ ಮಂಚ್ ನ ರಾಷ್ಟ್ರೀಯ ಅಧ್ಯಕ್ಷ ಜಾವೇದ ಮಲಿಕ್ ಅವರು ಕೂಡ ಈ ಕಾಯ್ದೆಯನ್ನು ಬೆಂಬಲಿಸಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದರ ವಿಚಾರಣೆಯು ಜನವರಿ ೨೮ ರಂದು ನಡೆಯಲಿದೆ. ಅಷ್ಟೇ ಅಲ್ಲದೆ, ‘ಲವ್ ಜಿಹಾದ್ ಕಾಯ್ದೆಯ ಅಗತ್ಯವೇಕಿದೆ ?’ ಎಂಬುದಕ್ಕೆ ೩ ವಾರಗಳಲ್ಲಿ ಉತ್ತರ ನೀಡುವಂತೆ ನ್ಯಾಯಾಲಯವು ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ.
SC on ‘Love Jihad’ Laws ⚖️
Supreme Court seeks responses from all States within 3 weeks on why anti–‘Love Jihad’ laws are necessary.
Laws exist in UP, Uttarakhand, MP, Gujarat, Rajasthan & HP.
Petitions challenging them have been filed by Jamiat Ulama-i-Hind and Citizens for… pic.twitter.com/q5E2NvIzlZ
— Sanatan Prabhat (@SanatanPrabhat) December 17, 2025
‘ಜಮಿಯತ್ ಉಲೇಮಾ-ಎ-ಹಿಂದ್’ ಮತ್ತು ‘ಸಿಟಿಜನ್ ಫಾರ್ ಜಸ್ಟಿಸ್ ಅಂಡ್ ಪೀಸ್’ ಎಂಬ ಸಂಸ್ಥೆಗಳು ಈ ಕಾಯ್ದೆಯ ವಿರುದ್ಧ ಅರ್ಜಿಗಳನ್ನು ಸಲ್ಲಿಸಿವೆ. ಕಾಯ್ದೆಯು ದುರ್ಬಳಕೆಯಾಗುವ ಸಾಧ್ಯತೆಯಿದೆ ಮತ್ತು ಇದರಿಂದ ಧಾರ್ಮಿಕ ಸ್ವಾತಂತ್ರ್ಯ ಹಾಗೂ ವೈಯಕ್ತಿಕ ಹಕ್ಕುಗಳಿಗೆ ಧಕ್ಕೆಯಾಗಬಹುದು ಎಂದು ಅರ್ಜಿದಾರರು ವಾದಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯವು ಈಗ ಎಲ್ಲಾ ಪಕ್ಷಗಳ ವಾದವನ್ನು ಆಲಿಸಿ ನಿರ್ಧಾರ ಕೈಗೊಳ್ಳಲಿದೆ. ಈ ಅರ್ಜಿಗಳು ಮತ್ತು ಕಾಯ್ದೆಯ ಪರವಾಗಿ ಜಾವೇದ ಮಲಿಕ ಸಲ್ಲಿಸಿರುವ ಅರ್ಜಿಯ ಬಗ್ಗೆ ನ್ಯಾಯಾಲಯದಲ್ಲಿ ಒಟ್ಟಿಗೆ ವಿಚಾರಣೆ ನಡೆಯಲಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!