ಕ್ಷಮೆಯಾಚಿಸಿ, ನಂತರ ಎಚ್ಚರಿಕೆ ನೀಡಿಲ್ಲ ಎಂದು ಹೇಳಬೇಡಿ!

ನವ ದೆಹಲಿ – ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನೇಮಕಾತಿ ಪತ್ರ ವಿತರಿಸುವ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ ಪ್ರಶಸ್ತಿ ನೀಡುವಾಗ, ಆಕೆ ಧರಿಸಿದ್ದ ಹಿಜಾಬ್ ತೆಗೆಯಲು ಪ್ರಯತ್ನಿಸಿದರು. ಈ ಘಟನೆಯ ಬಗ್ಗೆ ದೇಶಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಈಗ ಪಾಕಿಸ್ತಾನದ ಕುಖ್ಯಾತ ಗೂಂಡಾ ಶಹಜಾದ್ ಭಟ್ಟಿ ಎಂಬವನು ವಿಡಿಯೋ ಬಿಡುಗಡೆ ಮಾಡುವ ಮೂಲಕ ಬೆದರಿಕೆ ಹಾಕಿದ್ದಾನೆ. ಆತ, ಮುಖ್ಯಮಂತ್ರಿಗಳು ಬಹಿರಂಗವಾಗಿ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ನಂತರ ನಮಗೆ ಎಚ್ಚರಿಕೆ ನೀಡಿರಲಿಲ್ಲ ಎಂದು ಹೇಳಬೇಡಿ ಎಂದು ಹೇಳಿದ್ದಾನೆ.
🚨 Open Threat from Pakistan! 🚨
“Apologize, or face consequences!” – Notorious Pakistani gangster Shahzad Bhatti threatens Bihar CM Nitish Kumar over a hijab issue.
How does a Pakistani criminal dare to threaten an Indian Chief Minister?
🇮🇳 India must summon the Pakistani… pic.twitter.com/53wVUuy61H
— Sanatan Prabhat (@SanatanPrabhat) December 17, 2025
ಭಟ್ಟಿ ತನ್ನ ವಿಡಿಯೋದಲ್ಲಿ, “ಬಿಹಾರದಲ್ಲಿ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ಉನ್ನತ ಪದವಿಯಲ್ಲಿರುವ ವ್ಯಕ್ತಿಯೊಬ್ಬರು ಮುಸ್ಲಿಂ ಮಹಿಳೆಯ ಜೊತೆ ಈ ರೀತಿ ವರ್ತಿಸುತ್ತಾರೆ. ನಂತರ ಶಹಜಾದ್ ಭಟ್ಟಿ ಇದನ್ನು ಮಾಡಿದ, ಅದನ್ನು ಮಾಡಿದ ಎಂದು ನನ್ನ ಮೇಲೆ ಆರೋಪ ಹೊರಿಸಲಾಗುತ್ತದೆ. ಆ ವ್ಯಕ್ತಿಗೆ (ನಿತೀಶ್ ಕುಮಾರ್) ಇನ್ನು ಕೂಡ ಸಮಯವಿದೆ, ಅವರು ಆ ಮಹಿಳೆಯ ಕ್ಷಮೆ ಕೇಳಬೇಕು. ಇಂದು ಕ್ಷಮೆ ಕೇಳದಿದ್ದರೆ, ಸಂಬಂಧಪಟ್ಟ ಸಂಸ್ಥೆಗಳು ಇದರ ವಿರುದ್ಧ ಕ್ರಮ ಕೈಗೊಳ್ಳಲಿ. ನಂತರ ಎಚ್ಚರಿಕೆ ನೀಡಿರಲಿಲ್ಲ ಎಂದು ಹೇಳಬೇಡಿ,” ಎಂದು ಹೇಳಿದ್ದಾನೆ.
ಸಂಪಾದಕೀಯ ನಿಲುವುಪಾಕಿಸ್ತಾನಿ ಗೂಂಡಾನಿಗೆ ಭಾರತದ ಮುಖ್ಯಮಂತ್ರಿಯೊಬ್ಬರಿಗೆ ಬೆದರಿಕೆ ಹಾಕುವ ಧೈರ್ಯ ಬಂದಿದ್ದಾದರೂ ಹೇಗೆ? ಈ ವಿಷಯವಾಗಿ ಭಾರತವು ಪಾಕಿಸ್ತಾನದ ರಾಯಭಾರಿಗಳನ್ನು ತರಾಟೆಗೆ ತೆಗೆದುಕೊಳ್ಳಬೇಕು! ಹಾಗೆಯೇ ಈ ಗೂಂಡಾನನ್ನು ಭಾರತದ ವಶಕ್ಕೆ ನೀಡುವಂತೆ ಸೂಚಿಸಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!