ಈಶಾನ್ಯ ಭಾರತವನ್ನು ಪ್ರತ್ಯೇಕಿಸುವ ಬಾಂಗ್ಲಾದೇಶಿ ನಾಯಕ ಬೆದರಿಕೆ ನೀಡಿದ ಪ್ರಕರಣ !

ನವ ದೆಹಲಿ – ಬಾಂಗ್ಲಾದೇಶದ ನ್ಯಾಷನಲ್ ಸಿಟಿಜನ್ ಪಾರ್ಟಿಯ (ಎನ್.ಸಿ.ಪಿ) ನಾಯಕ ಹಸನತ್ ಅಬ್ದುಲ್ಲಾ ಅವರು ‘ಬಾಂಗ್ಲಾದೇಶದಲ್ಲಿ ಅಸ್ಥಿರತೆ ಉಂಟಾದರೆ ಈಶಾನ್ಯ ಭಾರತದ ೭ ರಾಜ್ಯಗಳನ್ನು ಪ್ರತ್ಯೇಕಿಸುತ್ತೇವೆ ಮತ್ತು ಅಲ್ಲಿನ ಪ್ರತ್ಯೇಕತಾವಾದಿ ಗುಂಪುಗಳಿಗೆ ಆಶ್ರಯ ನೀಡುತ್ತೇವೆ’ ಎಂದು ಬೆದರಿಕೆ ಹಾಕಿದ್ದರು. ಈ ಪ್ರಚೋದನಾಕಾರಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಭಾರತವು ದೆಹಲಿಯಲ್ಲಿರುವ ಬಾಂಗ್ಲಾದೇಶದ ಹೈಕಮಿಷನರ್ಗೆ ತಕ್ಷಣವೇ ಹಾಜರಾಗುವಂತೆ ಆದೇಶ ನೀಡಿ ಈ ಬೆದರಿಕೆಯ ಬಗ್ಗೆ ಭಾರತವು ನೇರವಾಗಿ ವಿವರಣೆಯನ್ನು ಕೇಳಿತು. ಈ ವಿಷಯದ ಕುರಿತು ಉಭಯ ರಾಷ್ಟ್ರಗಳ ಅಧಿಕಾರಿಗಳ ನಡುವೆ ಸುಮಾರು ೨೦ ನಿಮಿಷಗಳ ಕಾಲ ಚರ್ಚೆ ನಡೆಯಿತು.
ಈ ಮೊದಲು ದೆಹಲಿಯ ಬಾಂಗ್ಲಾದೇಶ ರಾಯಭಾರ ಕಚೇರಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಬಾಂಗ್ಲಾದೇಶದ ವಿಜಯ ದಿನವನ್ನು ಆಚರಿಸಲಾಯಿತು. ಹೈಕಮಿಷನರ್ ಎಂ. ರಿಯಾಜ್ ಹಮೀದುಲ್ಲಾ ಅವರು ಈ ಸಂದರ್ಭದಲ್ಲಿ ಮಾತನಾಡುತ್ತಾ ಯುವ ಪೀಳಿಗೆಯ ಆಕಾಂಕ್ಷೆಗಳನ್ನು ಪೂರೈಸುವ ಬಗ್ಗೆ ಬದ್ಧತೆಯನ್ನು ವ್ಯಕ್ತಪಡಿಸಿದರು. ಡಿಸೆಂಬರ್ ೧೬, ೧೯೭೧ ರಂದು ಪಾಕಿಸ್ತಾನವನ್ನು ಸೋಲಿಸಿ ಬಾಂಗ್ಲಾದೇಶವನ್ನು ನಿರ್ಮಿಸಲಾಯಿತು. ಭಾರತೀಯ ಸೇನೆಯು ಸಹ ಈ ದಿನವನ್ನು ವಿಜಯ ದಿನವನ್ನಾಗಿ ಆಚರಿಸುತ್ತದೆ.
ಸಂಪಾದಕೀಯ ನಿಲುವುಬಾಂಗ್ಲಾದೇಶಕ್ಕೆ ಕೇವಲ ತರಾಟೆಗೆ ತೆಗೆದುಕೊಂಡರೆ ಸಾಲದು, ಬದಲಾಗಿ ಅದಕ್ಕೆ ಜೀವನಪೂರ್ತಿ ಮರೆಯಲಾಗದಂತಹ ಪಾಠ ಕಲಿಸುವುದು ಆವಶ್ಯಕವಾಗಿದೆ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation