ಯಾವುದೇ ಸಂದೇಹಾಸ್ಪದ ವಸ್ತು ಪತ್ತೆಯಾಗಿಲ್ಲ!

ಮುಂಬಯಿ – ಮುಂಬಯಿ ಉಚ್ಚ ನ್ಯಾಯಾಲಯ ಮತ್ತು ಮುಂಬಯಿನಲ್ಲಿರುವ ಎಲ್ಲಾ ನ್ಯಾಯಾಲಯಗಳನ್ನು ಬಾಂಬ್ ನಿಂದ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶವು ಮುಂಬಯಿ ಉಚ್ಚ ನ್ಯಾಯಾಲಯನ ವೆಬ್ಸೈಟ್ಗೆ ಬಂದಿದೆ. ಇದರಲ್ಲಿ ಕಿಲಾ ನ್ಯಾಯಾಲಯ ಮತ್ತು ಬಾಂದ್ರಾ ನ್ಯಾಯಾಲಯದ ಉಲ್ಲೇಖವಿತ್ತು. ಪೊಲೀಸರು ನ್ಯಾಯಾಲಯದ ಆವರಣದಲ್ಲಿ ಭದ್ರತೆ ಹೆಚ್ಚಿಸಿದರು ಮತ್ತು ಉಚ್ಚ ನ್ಯಾಯಾಲಯವನ್ನು ತಕ್ಷಣ ಖಾಲಿ ಮಾಡಲು ಸೂಚಿಸಿದರು. ಬಾಂಬ್ ನಿಷ್ಕ್ರಿಯ ದಳವು ಕೂಲಂಕುಷವಾಗಿ ಪರಿಶೀಲಿಸಿದರೂ ಅಲ್ಲಿ ಏನೂ ಪತ್ತೆಯಾಗಿಲ್ಲ. ನಂತರ, ನ್ಯಾಯಾಲಯದ ಕಲಾಪಗಳು ಪುನಃ ಸುಗಮವಾಗಿ ಪ್ರಾರಂಭವಾದವು.
ನಾಗಪುರ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಬಾಂಬ್ನಿಂದ ಸ್ಫೋಟಿಸುವ ಬೆದರಿಕೆಯ ಇ-ಮೇಲ್ ಬಂದಿದೆ. ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳು ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಿದರು. ಬಾಂಬ್ಗಾಗಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ಇಮೇಲ್ ಅನ್ನು ಯಾರು ಕಳುಹಿಸಿದ್ದಾರೆ, ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ. ಪ್ರಸ್ತುತ ಯಾವುದೇ ಸಂದೇಹಾಸ್ಪದ ವಸ್ತು ಪತ್ತೆಯಾಗಿಲ್ಲ; ಆದರೆ ಈ ಘಟನೆಯಿಂದಾಗಿ ನ್ಯಾಯಾಲಯದ ಕಾರ್ಯ ಕಲಾಪಗಳ ಮೇಲೆ ಸ್ವಲ್ಪ ಸಮಯದವರೆಗೆ ಪರಿಣಾಮ ಬೀರಿತು.
ಸಂಪಾದಕೀಯ ನಿಲುವುಪೊಲೀಸ್ ವ್ಯವಸ್ಥೆಯ ಮಾನವ ಶಕ್ತಿ ಮತ್ತು ಸಮಯವನ್ನು ವ್ಯರ್ಥ ಮಾಡುವವರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು! ಅದರ ವಿನಹಃ ಈ ರೀತಿಯ ಕೃತ್ಯಗಳು ನಿಲ್ಲುವುದಿಲ್ಲ! |
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ