ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್

ಅಮರಾವತಿ (ಆಂಧ್ರಪ್ರದೇಶ) – ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ ಕಲ್ಯಾಣ್ ಅವರು ಬಾಂಗ್ಲಾದೇಶದಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಅಮಾನವೀಯ ಹತ್ಯೆಯ ಬಗ್ಗೆ ತೀವ್ರ ದುಃಖ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ ಅವರು, ಈ ಘಟನೆಯು ಮಾನವೀಯತೆಯ ಅಧಃಪತನದ ಸಂಕೇತವಾಗಿದೆ. 1971 ರಲ್ಲಿ ಭಾರತೀಯ ಸೈನಿಕರು ತಮ್ಮ ರಕ್ತವನ್ನು ಹರಿಸಿ ಯಾವ ಭೂಮಿಗೆ ಸ್ವಾತಂತ್ರ್ಯ ಕೊಡಿಸಿದ್ದರೋ, ಅದೇ ಭೂಮಿಯಲ್ಲಿ ಇಂದು ಮುಗ್ಧ ಅಲ್ಪಸಂಖ್ಯಾತರ ಹತ್ಯೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪವನ ಕಲ್ಯಾಣ್ ಅವರು ಅಂಕಿಅಂಶಗಳನ್ನು ಉಲ್ಲೇಖಿಸುತ್ತಾ, 1951 ರಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಜನಸಂಖ್ಯೆ ಸುಮಾರು ಶೇಕಡಾ 22 ರಷ್ಟು ಇತ್ತು, ಅದು ಈಗ ಶೇಕಡಾ 8 ಕ್ಕಿಂತಲೂ ಕಡಿಮೆಯಾಗಿದೆ. ಇದು ಕೇವಲ ವಲಸೆಯ ವಿಷಯವಲ್ಲ, ಬದಲಿಗೆ ಅಲ್ಪಸಂಖ್ಯಾತರನ್ನು ಗುರಿಪಡಿಸಿ ವ್ಯವಸ್ಥಿತವಾಗಿ ನಡೆಯುತ್ತಿರುವ ಚಿತ್ರಹಿಂಸೆಯ ಸಂಕೇತವಾಗಿದೆ ಎಂದು ಹೇಳಿದರು. ಇಸ್ಕಾನ್ ದೇವಾಲಯದ ಸಂತ ಚಿನ್ಮಯ ದಾಸ್ ಅವರ ಬಂಧನ ಮತ್ತು ಅದರ ನಂತರ ದೀಪು ದಾಸ್ ಅವರನ್ನು ಮರಕ್ಕೆ ನೇತುಹಾಕಿ ಸುಟ್ಟ ಘಟನೆಯು ಅಲ್ಲಿ ಕಾನೂನಿನ ಆಡಳಿತ ಅಂತ್ಯಗೊಂಡಿರುವುದನ್ನು ತೋರಿಸುತ್ತದೆ ಎಂದಿದ್ದಾರೆ.
ಅಂತರಾಷ್ಟ್ರೀಯ ಸಮುದಾಯದ ಮೌನವು ಮಾನವ ಹಕ್ಕುಗಳಿಗೆ ಮಾಡುವ ದ್ರೋಹ!
ಬಾಂಗ್ಲಾದೇಶದ ನಾಯಕತ್ವ ಮತ್ತು ವಿಶ್ವಸಂಸ್ಥೆಯು ಈ ಅಮಾನವೀಯ ಕೃತ್ಯವನ್ನು ಕೇವಲ ಖಂಡಿಸುವುದಲ್ಲದೆ, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಪವನ್ ಕಲ್ಯಾಣ್ ಕರೆ ನೀಡಿದ್ದಾರೆ. ಭಾರತೀಯ ಹುತಾತ್ಮರು ಶಾಂತಿಗಾಗಿ ಪ್ರಾಣತ್ಯಾಗ ಮಾಡಿದ್ದಾರೆಯೇ ಹೊರತು, ಅಲ್ಪಸಂಖ್ಯಾತರ ಮೇಲಿನ ಇಂತಹ ದೌರ್ಜನ್ಯಗಳಿಗಾಗಿ ಅಲ್ಲ ಎಂದು ಅವರು ದೃಢವಾಗಿ ಹೇಳಿದರು. ಅಂತರಾಷ್ಟ್ರೀಯ ಸಮುದಾಯದ ಮೌನವು ಮಾನವ ಹಕ್ಕುಗಳ ಮೇಲಿನ ವಿಶ್ವಾಸಘಾತವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಂಪಾದಕೀಯ ನಿಲುವುಭಾರತದಲ್ಲಿನ ಎಷ್ಟು ಆಡಳಿತಗಾರರು ಈ ಘಟನೆಯನ್ನು ಖಂಡಿಸಿದ್ದಾರೆ, ಎಂಬುದನ್ನು ಹಿಂದೂಗಳು ಗಮನಿಸಬೇಕು! ಹಿಂದೂಗಳ ರಕ್ಷಣೆಯ ವಿಷಯದಲ್ಲಿ ಹಿಂದೂಗಳೇ ನಿಷ್ಕ್ರಿಯರಾಗಿರುವುದರಿಂದ ಆಡಳಿತಗಾರರೂ ಸಹ ಹಾಗೆಯೇ ಆಗಿದ್ದಾರೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !