|

ಹರ್ದೋಯಿ (ಉತ್ತರ ಪ್ರದೇಶ) – ಹರ್ದೋಯಿ ಜಿಲ್ಲೆಯ ಶಾಹಾಬಾದ್ ಪ್ರದೇಶದಲ್ಲಿರುವ ಬಿ.ಎನ್. ಪದವಿ ಮಹಾವಿದ್ಯಾಲಯದ ಕಾನೂನು ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ ಅಮಿತ್ ಯಾದವ್, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾಕ್ಟರ್ ಉಮರ್ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ತಾವು ತಿಲಕ ಹಾಕಿ ಕಾಲೇಜಿಗೆ ಬಂದಿದ್ದಕ್ಕಾಗಿ ಪ್ರಾಚಾರ್ಯರು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಅಮಿತ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಇನ್ನೊಂದೆಡೆ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮಹಾವಿದ್ಯಾಲಯಕ್ಕೆ ಧಾವಿಸಿ, ವಿದ್ಯಾರ್ಥಿಯೊಂದಿಗೆ ನಡೆದ ಅಸಭ್ಯ ವರ್ತನೆಯನ್ನು ಖಂಡಿಸಿದರು. ಭವಿಷ್ಯದಲ್ಲಿ ಯಾವುದೇ ವಿದ್ಯಾರ್ಥಿಗೆ ಇಂತಹ ತಾರತಮ್ಯ ಎಸಗಿದರೆ ಸಂಘಟನೆಯು ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ದೂರು ಸ್ವೀಕರಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಉಪಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಮಿತ್ ಯಾದವ್ ಅವರ ಪ್ರಕಾರ, “ನಾನು ನನ್ನ ಧಾರ್ಮಿಕ ನಂಬಿಕೆಯಂತೆ ತಿಲಕ ಧರಿಸಿ ಕಾಲೇಜಿಗೆ ಹೋಗಿದ್ದೆ; ಆದರೆ ಪ್ರಾಚಾರ್ಯರು ‘ಇದೇನು ಗುರುಕುಲವಲ್ಲ’ ಎಂದು ಹೇಳುತ್ತಾ, ‘ತಿಲಕ ಅಳಿಸಿದ ನಂತರವೇ ಪ್ರವೇಶ ಸಿಗುವುದು’ ಎಂದು ಹೇಳಿದರು.
ಪ್ರಾಚಾರ್ಯರಿಂದ ಆರೋಪ ನಿರಾಕರಣೆ
ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಉಮರ್ ಅವರು ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದಾರೆ. ತಾವು ಯಾವುದೇ ವಿದ್ಯಾರ್ಥಿಗೆ ತಿಲಕ ಧರಿಸುವುದನ್ನು ತಡೆದಿಲ್ಲ ಮತ್ತು ಅಂತಹ ಯಾವುದೇ ಟೀಕೆಗಳನ್ನು ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಂಪಾದಕೀಯ ನಿಲುವು
|
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ