
ಲಕ್ಷ್ಮಣಪುರಿ (ಉತ್ತರಪ್ರದೇಶ) – ಹಿಂದಿನ ಸಮಾಜವಾದಿ ಪಕ್ಷದ ಸರಕಾರದ ಅವಧಿಯಲ್ಲಿ ಅಂಗೀಕರಿಸಲ್ಪಟ್ಟಿದ್ದ, ಮದರಸಾ ಶಿಕ್ಷಕರನ್ನು ಕಾನೂನು ಕ್ರಮದಿಂದ ರಕ್ಷಿಸುವ ವಿಧೇಯಕವನ್ನು ಈಗಿನ ಯೋಗಿ ಆದಿತ್ಯನಾಥ ಸರಕಾರವು ಹಿಂಪಡೆದಿದೆ. ಈ ವಿಧೇಯಕದಲ್ಲಿ ಸಂವಿಧಾನವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿತ್ತು ಮತ್ತು ಮದರಸಾಗಳಿಗೆ ಅಪರಿಮಿತ ಅಧಿಕಾರಗಳನ್ನು ನೀಡಲಾಗಿತ್ತು.
೧. ಸಚಿವ ಓಂ ಪ್ರಕಾಶ ರಾಜಭರ ಅವರು ಮಾತನಾಡುತ್ತಾ, ೨೦೦೬ ರಲ್ಲಿ ಉತ್ತರಪ್ರದೇಶ ಮದರಸಾ ಅಧ್ಯಾಪಕರು ಮತ್ತು ಇತರ ಸಿಬ್ಬಂದಿ ವೇತನ ವಿಧೇಯಕವನ್ನು ಅಂಗೀಕರಿಸಲಾಗಿತ್ತು ಎಂದು ತಿಳಿಸಿದರು.
೨. ಈ ವಿಧೇಯಕದ ಪ್ರಕಾರ, ಮದರಸಾದ ಯಾವುದೇ ಶಿಕ್ಷಕ ಅಥವಾ ಸಿಬ್ಬಂದಿಯ ವಿರುದ್ಧ ತನಿಖೆ ಅಥವಾ ಮೊಕದ್ದಮೆಯನ್ನು ದಾಖಲಿಸಲು ಅವಕಾಶವಿರಲಿಲ್ಲ. ವೇತನ ನೀಡುವಲ್ಲಿ ವಿಳಂಬವಾದರೆ ಸಂಬಂಧಪಟ್ಟ ಅಧಿಕಾರಿಗೆ ಶಿಕ್ಷೆ ನೀಡುವ ಸೌಲಭ್ಯವೂ ಈ ವಿಧೇಯಕದಲ್ಲಿತ್ತು.
೩. ಸಮಾಜವಾದಿ ಪಕ್ಷದ ಸರಕಾರದ ಅವಧಿಯಲ್ಲಿ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ನಂತರ, ಅಂದಿನ ರಾಜ್ಯಪಾಲ ರಾಮ ನಾಯ್ಕ ಅವರು ಈ ವಿಧೇಯಕಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು ಮತ್ತು ಅದನ್ನು ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು.
೪. ಈ ವಿಧೇಯಕವು ಸಂವಿಧಾನದ ಚೌಕಟ್ಟಿನಲ್ಲಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು. ಈ ಕಾರಣದಿಂದಾಗಿ ಸಮಾಜವಾದಿ ಪಕ್ಷದ ಸರಕಾರದ ಕಾಲದಲ್ಲಿ ಈ ವಿಧೇಯಕವು ಜಾರಿಗೆ ಬರಲು ಸಾಧ್ಯವಾಗಿರಲಿಲ್ಲ.
೫. ೨೦೧೭ ರಲ್ಲಿ ಅಧಿಕಾರಕ್ಕೆ ಬಂದ ಭಾಜಪ ಸರಕಾರಕ್ಕೆ ರಾಷ್ಟ್ರಪತಿಗಳು ಈ ವಿಧೇಯಕವನ್ನು ಮರಳಿ ಕಳುಹಿಸಿದರು.
೬. ಅನೇಕ ಲೋಪದೋಷಗಳಿದ್ದ ಕಾರಣ, ಕೇಂದ್ರ ಸರಕಾರವು ಸಂವಿಧಾನದ ಚೌಕಟ್ಟಿಗೆ ಅನುಗುಣವಾಗಿ ಹೊಸ ವಿಧೇಯಕವನ್ನು ತರುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತು. ಈಗ ರಾಜ್ಯ ಸಚಿವ ಸಂಪುಟವು ಈ ಹಳೆಯ ವಿಧೇಯಕವನ್ನು ಹಿಂಪಡೆಯುವ ಪ್ರಸ್ತಾವನೆಗೆ ಸಮ್ಮತಿ ನೀಡಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !