|

ಚೆನ್ನೈ (ತಮಿಳುನಾಡು) – ಆಸ್ಟ್ರೇಲಿಯಾದಂತೆ ಭಾರತದಲ್ಲೂ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದನ್ನು ನಿಷೇಧಿಸಬೇಕು ಎಂದು ಮದ್ರಾಸ್ ಉಚ್ಚ ನ್ಯಾಯಾಲಯ ಡಿಸೆಂಬರ್ 26 ರಂದು ಕೇಂದ್ರ ಸರಕಾರಕ್ಕೆ ಸೂಚಿಸಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಅಪ್ರಾಪ್ತ ಮಕ್ಕಳಿಗೆ ಅಶ್ಲೀಲ ವಿಷಯಗಳು ಸುಲಭವಾಗಿ ಲಭ್ಯವಾಗುತ್ತಿವೆ ಎಂಬ ವಿಷಯದ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮಧುರೈ ಪೀಠದ ನ್ಯಾಯಮೂರ್ತಿ ಜಿ. ಜಯರಾಮನ್ ಮತ್ತು ನ್ಯಾಯಮೂರ್ತಿ ಕೆ.ಕೆ. ರಾಮಕೃಷ್ಣನ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
🛑 Protect Children Online | Madras High Court Sends Strong Signal
Court urges Centre to consider banning social media for kids under 16, on lines of Australia.
Key Points👇
🚫 Possible Under-16 social media ban👨👩👧 “Parental Window Service” for monitoring phone use
— Sanatan Prabhat (@SanatanPrabhat) December 27, 2025
ಇತ್ತೀಚೆಗೆ ಅಂದರೆ ಡಿಸೆಂಬರ್ 9 ರಂದು ಆಸ್ಟ್ರೇಲಿಯಾವು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಮಾಧ್ಯಮಗಳಲ್ಲಿ ಖಾತೆ ತೆರೆಯುವುದನ್ನು ನಿಷೇಧಿಸಿದೆ. ಇಂತಹ ನಿಷೇಧ ಹೇರಿದ ವಿಶ್ವದ ಮೊದಲ ದೇಶ ಆಸ್ಟ್ರೇಲಿಯಾ ಆಗಿದೆ.
ಮದ್ರಾಸ್ ಉಚ್ಚ ನ್ಯಾಯಾಲಯ ನಿಖರವಾಗಿ ಏನು ಹೇಳಿದೆ?
ಇಂಟರ್ನೆಟ್ ಸೇವಾ ಪೂರೈಕೆದಾರರಿಗೆ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತರಬೇಕು. ಪೋಷಕರು ತಮ್ಮ ಮಕ್ಕಳ ಆನ್ಲೈನ್ ಚಟುವಟಿಕೆಗಳನ್ನು ನಿಯಂತ್ರಿಸಲು ಅನುಕೂಲವಾಗುವಂತೆ ‘ಪೇರೆಂಟಲ್ ವಿಂಡೋ ಸರ್ವಿಸ್’ ನೀಡುವುದನ್ನು ಕಡ್ಡಾಯಗೊಳಿಸಬೇಕು. ಅಲ್ಲದೆ ಹೊಸ ಕಾನೂನು ಬರುವವರೆಗೆ ಸರಕಾರವು ಜನಜಾಗೃತಿ ಅಭಿಯಾನವನ್ನು ತೀವ್ರಗೊಳಿಸಬೇಕು. ಮಕ್ಕಳು ಮತ್ತು ಪೋಷಕರಿಗೆ ಸುರಕ್ಷಿತ ಇಂಟರ್ನೆಟ್ ಬಳಕೆಯ ಸುಲಭ ವಿಧಾನಗಳನ್ನು ವಿವರಿಸಬೇಕು.
ಅರ್ಜಿದಾರರ ಬೇಡಿಕೆ ಹೀಗಿದೆ!
ಈ ಪ್ರಕರಣವು ಹಳೆಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದೆ. ಇದರಲ್ಲಿ ಮಕ್ಕಳಿಗೆ ಇಂಟರ್ನೆಟ್ನಲ್ಲಿ ಅಶ್ಲೀಲ ಮತ್ತು ‘ಪೋರ್ನೋಗ್ರಾಫಿಕ್’ ವಿಷಯಗಳು ಅತ್ಯಂತ ಸುಲಭವಾಗಿ ಸಿಗುತ್ತವೆ. ಇದನ್ನು ತಡೆಯಲು ಯಾವುದೇ ದೃಢವಾದ ವ್ಯವಸ್ಥೆ ಇಲ್ಲ ಎಂದು ಹೇಳಲಾಗಿದೆ. ‘ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’, ‘ತಮಿಳುನಾಡು ಮಕ್ಕಳ ಹಕ್ಕುಗಳ ಆಯೋಗ’ ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರ ಸಂಸ್ಥೆಗಳಿಗೆ ಪೇರೆಂಟಲ್ ಕಂಟ್ರೋಲ್ ಸಿಸ್ಟಮ್ ಜಾರಿಗೆ ತರಲು ಮತ್ತು ಶಾಲೆ ಹಾಗೂ ಸಮಾಜದಲ್ಲಿ ದೊಡ್ಡ ಮಟ್ಟದಲ್ಲಿ ಜನಜಾಗೃತಿ ಅಭಿಯಾನ ನಡೆಸಲು ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಬೇಡಿಕೆ ಇಡಲಾಗಿತ್ತು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !