|

ವಲಸಾಡ್ (ಗುಜರಾತ್) – ಇಲ್ಲಿನ ಉಮರಗಾಮ್ ತಾಲೂಕಿನ ಸಾರಿಗಾಮ್ ಪ್ರದೇಶದಲ್ಲಿ ಡಿಸೆಂಬರ್ ೨೪, ೨೦೨೫ ರಂದು ಗಬ್ಬದ ಹಸುವನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದರು. ಈ ಸಂದರ್ಭದಲ್ಲಿ ಪೊಲೀಸರಿಗೆ ಹಸುವಿನ ಕತ್ತರಿಸಿದ ತಲೆ ಮತ್ತು ಮಾಂಸದ ಅವಶೇಷಗಳು ಪತ್ತೆಯಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸದ್ದಾಂ ಖಾನ್ ಮತ್ತು ಆತನ ಒಬ್ಬ ಅಪ್ರಾಪ್ತ ವಯಸ್ಕ ಸಹಚರನನ್ನು ಬಂಧಿಸಿದ್ದಾರೆ.
೧. ಮತಾಂಧ ಆರೋಪಿಗಳು ಹಸುವಿಗೆ ಮೇವು ಹಾಕುವ ನೆಪದಲ್ಲಿ ಅದನ್ನು ಆ ಪ್ರದೇಶಕ್ಕೆ ಕರೆತಂದು ಕ್ರೂರವಾಗಿ ಹತ್ಯೆ ಮಾಡಿದ್ದಾರೆ.
೨. ಘಟನಾ ಸ್ಥಳಕ್ಕೆ ಬಂದ ಗೋರಕ್ಷಕರ ಮೇಲೆ ಸದ್ದಾಂ ಶಾಹಬುದ್ದೀನ್ ಖಾನ್ ಎಂಬಾತನು ತಲ್ವಾರ್ ನಿಂದ ದಾಳಿ ನಡೆಸಿದ್ದಾನೆ ಮತ್ತು ನಂತರ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ; ಆದರೆ ಪೊಲೀಸರು ಆತನನ್ನು ಮತ್ತು ಆತನ ಸಹಚರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
೩. ಈ ಘಟನೆಯ ನಂತರ ಸಾರಿಗಾಮ್ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಎರಡೂ ಸಮುದಾಯಗಳ ಪ್ರತಿನಿಧಿಗಳು, ವಿಶ್ವ ಹಿಂದೂ ಪರಿಷತ್ತಿನ ಪದಾಧಿಕಾರಿಗಳು, ಸ್ಥಳೀಯ ನಾಗರಿಕರು, ಪೊಲೀಸ್ ಅಧಿಕಾರಿಗಳು ಮತ್ತು ಉಮರಗಾಮ್ ಶಾಸಕ ರಮಣಭಾಯಿ ಪಾಟಕರ್ ಉಪಸ್ಥಿತರಿದ್ದರು. ಈ ಸಭೆಯಲ್ಲಿ ಗಬ್ಬದ ಹಸುವಿನ ಹತ್ಯೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಲಾಯಿತು. (ನಾಗರಿಕರು ಕೇವಲ ಅಸಮಾಧಾನ ವ್ಯಕ್ತಪಡಿಸಿ ಸುಮ್ಮನಾಗದೆ, ಗೋಮಾತೆಯನ್ನು ಕ್ರೂರವಾಗಿ ಕೊಂದವರಿಗೆ ಶಿಕ್ಷೆಯಾಗುವಂತೆ ಒತ್ತಡ ಹೇರಬೇಕು! – ಸಂಪಾದಕರು)
ಸಂಪಾದಕೀಯ ನಿಲುವುಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಉದ್ದೇಶಪೂರ್ವಕವಾಗಿ ನೋಯಿಸುವವರ ವಿರುದ್ಧ ಗುಜರಾತ್ನ ಭಾಜಪ ಸರಕಾರವು ಕಠಿಣ ಕ್ರಮ ಕೈಗೊಳ್ಳಬೇಕು! |
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ