
ಹೈದರಾಬಾದ್ (ತೆಲಂಗಾಣ) – ಭಾರತವು ಮತ್ತೊಮ್ಮೆ ‘ವಿಶ್ವಗುರು’ ಆಗುವ ದಿಕ್ಕಿನಲ್ಲಿ ಮುನ್ನಡೆಯಬೇಕು. ಇದು ಮಹತ್ವಾಕಾಂಕ್ಷೆಯಲ್ಲ, ಬದಲಾಗಿ ಸಂಪೂರ್ಣ ಜಗತ್ತಿನ ಹಿತಕ್ಕಾಗಿ ಕಾಲದ ಬೇಡಿಕೆಯಾಗಿದೆ, ಎಂದು ಪ.ಪೂ. ಸರಸಂಘಚಾಲಕ ಡಾ. ಮೋಹನ್ಜಿ ಭಾಗವತ್ ಅವರು ಹೇಳಿದರು. ಅವರು ಇಲ್ಲಿ ಒಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಪ.ಪೂ. ಭಾಗವತ್ ಅವರು ಮಾತು ಮುಂದುವರೆಸಿ, ಸನಾತನ ಧರ್ಮವನ್ನು ಪುನಃ ಜೀವಂತಗೊಳಿಸುವ ಸಮಯ ಬಂದಿದೆ. “ಸನಾತನ ಧರ್ಮವನ್ನು ಮತ್ತೆ ಜೀವಂತಗೊಳಿಸುವುದು ದೇವರ ಇಚ್ಛೆಯಾಗಿದ್ದು, ಹಿಂದೂ ರಾಷ್ಟ್ರದ ಉದಯವು ಸನಾತನ ಧರ್ಮವನ್ನು ಪುನರುಜ್ಜೀವನಗೊಳಿಸುವುದಕ್ಕಾಗಿಯೇ ಇದೆ’, ಎಂದು ಯೋಗಿ ಅರವಿಂದರು ೧೦೦ ವರ್ಷಗಳ ಹಿಂದೆಯೆ ಹೇಳಿದ್ದರು.
ಪ.ಪೂ. ಸರಸಂಘಚಾಲಕರು ಮಂಡಿಸಿದ ಮಹತ್ವಪೂರ್ಣ ಸೂತ್ರಗಳು!
೧. ಭಾರತದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ವಿದೇಶದಲ್ಲಿ ಹಿಂದೂ ಸ್ವಯಂಸೇವಕ ಸಂಘವು ಒಂದೇ ರೀತಿಯ ಕೆಲಸ ಮಾಡುತ್ತಿವೆ. ಎರಡೂ ಸಂಘಟನೆಗಳು ಹಿಂದೂಗಳ ಸಂಘಟನೆಗಾಗಿ ಕಾರ್ಯನಿರ್ವಹಿಸುತ್ತಿವೆ.
೨. ಭಾರತ, ಹಿಂದೂ ರಾಷ್ಟ್ರ, ಸನಾತನ ಧರ್ಮ ಮತ್ತು ಹಿಂದುತ್ವವು ಒಂದೇ ಸಿದ್ಧಾಂತದ ವಿಭಿನ್ನ ರೂಪಗಳಾಗಿವೆ.
೩. ಭಾರತೀಯರು ಭಾರತವನ್ನು ‘ವಿಶ್ವಗುರು’ ಮಾಡುವುದಕ್ಕಾಗಿ ನಿರಂತರವಾಗಿ ಪ್ರಯತ್ನ ಮಾಡಬೇಕಾಗುತ್ತದೆ. ನಾವು ಇದೇ ದಿಕ್ಕಿನಲ್ಲಿ ಕೆಲಸ ಮಾಡುತ್ತಿದ್ದೇವೆ ಮತ್ತು ವಿವಿಧ ಮಾರ್ಗಗಳಿಂದ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಪ್ರಯತ್ನಿಸುತ್ತಿದ್ದೇವೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ