
ಕಾನ್ಪುರ (ಉತ್ತರ ಪ್ರದೇಶ) – ಮ್ಯಾನ್ಮಾರ್ನ ರೋಹಿಂಗ್ಯಾ ನುಸುಳುಕೋರ ಮುಸ್ಲಿಮರನ್ನು ಭಾರತದಲ್ಲಿ ಕಾನೂನುಬಾಹಿರವಾಗಿ ನೆಲೆಸುವಂತೆ ಮಾಡುತ್ತಿದ್ದ ಗ್ಯಾಂಗ್ನ ಮೊಹಮ್ಮದ್ ಇಬ್ರಾಹಿಂ ಎಂಬಾತನನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಭಾರತದ 12 ರಾಜ್ಯಗಳಲ್ಲಿ 200ಕ್ಕೂ ಹೆಚ್ಚು ರೋಹಿಂಗ್ಯಾಗಳನ್ನು ಈತ ನೆಲೆಸುವಂತೆ ಮಾಡಿದ್ದಾನೆ ಎಂಬ ಶಂಕೆಯಿದೆ. ರೋಹಿಂಗ್ಯಾ ನುಸುಳುಕೋರರ ಜಾಲವು ಮ್ಯಾನ್ಮಾರ್, ನಂತರ ಬಾಂಗ್ಲಾದೇಶ ಮತ್ತು ಅಲ್ಲಿಂದ ಭಾರತದ ಅಸ್ಸಾಂನಿಂದ ಕಾಶ್ಮೀರದವರೆಗೆ ಹರಡಿದೆ. ಗುರುತು ಸಿಗದಂತೆ ಇವರು ಬೇರೆ ಬೇರೆ ರಾಜ್ಯಗಳಲ್ಲಿ ಅಡಗಿ ಕುಳಿತಿರುವುದು ಕಂಡುಬಂದಿದೆ.
1. ಕಾನ್ಪುರ ಸೆಂಟ್ರಲ್ ನಿಲ್ದಾಣದಲ್ಲಿ ಬಂಧಿತರಾದ ಮೊಹಮ್ಮದ್ ಇಬ್ರಾಹಿಂ, ಮೊಹಮ್ಮದ್ ಹಸಿಮ್ ಅಲಿಯಾಸ್ ನಾಸಿರ್ ಮತ್ತು ಶೋಕತಾರಾ ನೀಡಿದ ಮಾಹಿತಿಯ ಪ್ರಕಾರ, ಇವರು ಮೂಲತಃ ಮ್ಯಾನ್ಮಾರ್ನ ನಾಸಾಫುರು ಜಿಲ್ಲೆಯ ಮೊಗಂಡೋ ರಾಖಿನ ಪ್ರದೇಶದವರು. ಇವರು ಬಾಂಗ್ಲಾದೇಶದ ನಿರಾಶ್ರಿತರ ಶಿಬಿರದಲ್ಲಿ ವಾಸವಾಗಿದ್ದರು.
2. ಮೊಹಮ್ಮದ್ ಇಬ್ರಾಹಿಂ 2017ರಲ್ಲಿ ಬಾಂಗ್ಲಾದೇಶದಿಂದ ಭಾರತಕ್ಕೆ ಬಂದಿದ್ದನು. ಸ್ವಲ್ಪ ಸಮಯ ದೆಹಲಿಯಲ್ಲಿ ವಾಸವಿದ್ದ ಈತ 2024ರಲ್ಲಿ ಜಮ್ಮುವಿಗೆ ತೆರಳಿದ್ದನು. ಆನಂತರ ಬಾಂಗ್ಲಾದೇಶದಿಂದ ರೋಹಿಂಗ್ಯಾಗಳನ್ನು ಭಾರತಕ್ಕೆ ಕರೆತಂದು ನೆಲೆಸುವಂತೆ ಮಾಡುವ ಕೆಲಸದಲ್ಲಿ ಸಕ್ರಿಯನಾದನು. ತನಿಖಾ ಸಂಸ್ಥೆಗಳು ಈತನನ್ನು ತೀವ್ರ ವಿಚಾರಣೆಗೆ ಒಳಪಡಿಸಿವೆ.
ಸಂಪಾದಕೀಯ ನಿಲುವುಇಂತಹವರಿಗೂ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರುವುದು ಈಗ ಅತ್ಯಗತ್ಯವಾಗಿದೆ! |
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ