ಮುಸ್ಲಿಮರಿಂದ ಹಿಂಸಾಚಾರ; 7 ಪೊಲೀಸರಿಗೆ ಗಾಯ

ಕಾಠ್ಮಂಡು (ನೇಪಾಳ) – ಭಾರತದ ಗಡಿಯ ಸಮೀಪವಿರುವ ನೇಪಾಳದ ಧನುಷಾ ಜಿಲ್ಲೆಯಲ್ಲಿ, ಮುಸ್ಲಿಮರಿಂದ ಸಾಮಾಜಿಕ ಮಾಧ್ಯಮಗಳ ಮೂಲಕ ಹಿಂದೂ ವಿರೋಧಿ ವಿಡಿಯೋ ಪ್ರಸಾರವಾದ ನಂತರ ಮಸೀದಿಯನ್ನು ಧ್ವಂಸಗೊಳಿಸಲಾಗಿದೆ. ಈ ಘಟನೆ ಡಿಸೆಂಬರ್ ೪ ರಂದು ಸಂಭವಿಸಿದೆ. ಈ ಘಟನೆಯ ನಂತರ ಮುಸ್ಲಿಮರು ಸಹ ಹಿಂಸಾಚಾರ ನಡೆಸಿದರು. ಈ ಹಿಂಸಾಚಾರದಲ್ಲಿ ೭ ಪೊಲೀಸರು ಗಾಯಗೊಂಡರು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯು ಶೆಲ್ಗಳನ್ನು ಸಿಡಿಸಿದರು. ಸಾಮಾಜಿಕ ಸಾಮರಸ್ಯವನ್ನು ಹಾಳು ಮಾಡುವ ಯಾವುದೇ ಕೃತ್ಯಗಳಲ್ಲಿ ಜನರು ಭಾಗಿಯಾಗದಂತೆ ಜಿಲ್ಲಾಧಿಕಾರಿ ಭೋಲಾ ದಾಹಾಲ್ ಅವರು ಮನವಿ ಮಾಡಿದ್ದಾರೆ. ‘ಟಿಕ್ಟಾಕ್’ ಆ್ಯಪ್ನಲ್ಲಿ ವಿಡಿಯೋ ಪ್ರಸಾರ ಮಾಡಿದ್ದ ಮತ್ತು ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ೩ ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಮುಸ್ಲಿಂ ಯುವಕರು ಸಾಮಾಜಿಕ ಮಾಧ್ಯಮದಲ್ಲಿ ಹಿಂದೂ ವಿರೋಧಿ ವಿಷಯವನ್ನು ಪ್ರಸಾರ ಮಾಡಿದ್ದಾರೆಂಬ ಆರೋಪವಿದೆ.
ಸಂಪಾದಕೀಯ ನಿಲುವುಹಿಂದೂಗಳ ವಿರುದ್ಧ ವಿಡಿಯೋ ಪ್ರಸಾರ ಮಾಡಿದ್ದಲ್ಲದೆ ಹಿಂಸಾಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!