ಬ್ರಿಟಿಷ್ ಸಂಸದ ಬಾಬ್ ಬ್ಲ್ಯಾಕ್ಮನ್ ಹೇಳಿಕೆ

ಜೈಪುರ (ರಾಜಸ್ಥಾನ) – ಇಡೀ ಜಮ್ಮು-ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿರಬೇಕು ಎಂದು ಬ್ರಿಟನ್ ಸಂಸದ ಬಾಬ್ ಬ್ಲ್ಯಾಕ್ಮನ್ ಹೇಳಿಕೆ ನೀಡಿದ್ದಾರೆ. ಇಲ್ಲಿನ ಕಾನ್ಸ್ಟಿಟ್ಯೂಷನಲ್ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತಿದ್ದರು.
೧೯೯೨ ರಲ್ಲೇ ೩೭೦ ನೇ ವಿಧಿಯನ್ನು ರದ್ದುಪಡಿಸುವಂತೆ ಆಗ್ರಹಿಸಿದ್ದರು
ಬ್ಲ್ಯಾಕ್ ಮನ್ ಅವರು ಮಾತನಾಡಿ, ‘೧೯೯೨ ರಲ್ಲೇ ನಾನು ೩೭೦ ನೇ ವಿಧಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದೆ. ಆಗ ಕಾಶ್ಮೀರಿ ಹಿಂದೂಗಳು ತಮ್ಮ ಧರ್ಮ ಮತ್ತು ಅಸ್ಮಿತೆಯನ್ನು ಉಳಿಸಿಕೊಳ್ಳಲು ತಮ್ಮ ಮನೆಗಳನ್ನು ತೊರೆಯಬೇಕಾಯಿತು. ಆಗ ಬ್ರಿಟನ್ ನಲ್ಲಿ ಈ ಅನ್ಯಾಯದ ವಿರುದ್ಧ ಜನಜಾಗೃತಿ ಮೂಡಿಸಲು ಪ್ರಯತ್ನಿಸಲಾಗಿತ್ತು’ ಎಂದು ಸ್ಮರಿಸಿದರು.
ಭಯೋತ್ಪಾದನೆ ಮತ್ತು ಪಾಕಿಸ್ತಾನದ ವಿರುದ್ಧ ಖಂಡನೆ
ಜಮ್ಮು-ಕಾಶ್ಮೀರದಲ್ಲಿನ ಭಯೋತ್ಪಾದಕ ಚಟುವಟಿಕೆಗಳನ್ನು ನಾವು ನಿರಂತರವಾಗಿ ಖಂಡಿಸುತ್ತಿರುವುದಾಗಿ ಬ್ಲ್ಯಾಕ್ ಮನ್ ಹೇಳಿದರು. ಜಮ್ಮು-ಕಾಶ್ಮೀರದ ಕೆಲವು ಭಾಗಗಳ ಮೇಲೆ ಪಾಕಿಸ್ತಾನ ಹೊಂದಿರುವ ಅಕ್ರಮ ನಿಯಂತ್ರಣದ ಬಗ್ಗೆಯೂ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇಡೀ ಜಮ್ಮು-ಕಾಶ್ಮೀರವು ಭಾರತ ಸರಕಾರದ ಆಡಳಿತದಡಿ ಬರಬೇಕು ಎಂಬುದೇ ತಮ್ಮ ನಿಲುವಾಗಿದೆ ಎಂದು ಅವರು ಹೇಳಿದರು.
ಬ್ರಿಟನ್ ಭಾರತದ ಬೆನ್ನಿಗೆ ನಿಲ್ಲಲಿ !
ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ೨೬ ಜನರು ಸಾವನ್ನಪ್ಪಿದ ಘಟನೆಯನ್ನು ಬ್ಲ್ಯಾಕ್ ಮನ್ ತೀವ್ರವಾಗಿ ಖಂಡಿಸಿದ್ದರು. ನಿರಪರಾಧಿ ನಾಗರಿಕರ ಸಾವಿನ ಬಗ್ಗೆ ಅವರು ದುಃಖ ವ್ಯಕ್ತಪಡಿಸಿದರು ಮತ್ತು ಭಯೋತ್ಪಾದನೆಯ ವಿರುದ್ಧ ಭಾರತದೊಂದಿಗೆ ದೃಢವಾಗಿ ನಿಲ್ಲುವಂತೆ ಬ್ರಿಟನ್ ಸರಕಾರಕ್ಕೆ ಕರೆ ನೀಡಿದರು.
ಪಾಕಿಸ್ತಾನ ಒಂದು ‘ವಿಫಲ ರಾಷ್ಟ್ರ’
ಈ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಬ್ಲ್ಯಾಕ್ ಮನ್ ಅವರು ಪಾಕಿಸ್ತಾನವನ್ನು ‘ವಿಫಲ ರಾಷ್ಟ್ರ’ ಎಂದು ಕರೆದಿದ್ದರು ಮತ್ತು ಅಲ್ಲಿನ ಸೇನಾ-ರಾಜಕೀಯ ಸಮೀಕರಣಗಳನ್ನು ಪ್ರಶ್ನಿಸಿದ್ದರು. ಪಾಕಿಸ್ತಾನದಿಂದ ಭಾರತದಲ್ಲಿ ಭಯೋತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಸಮುದಾಯವು ಭಾರತದೊಂದಿಗೆ ಒಗ್ಗಟ್ಟಾಗಿ ನಿಲ್ಲುವ ಅವಶ್ಯಕತೆಯಿದೆ ಎಂದು ಕೂಡ ಬ್ಲ್ಯಾಕ್ ಮನ್ ಒತ್ತಿ ಹೇಳಿದರು.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ