
ಬೀಜಿಂಗ (ಚೀನಾ) – ಕಾಶ್ಮೀರ ಸಮಸ್ಯೆಯನ್ನು ದ್ವಿಪಕ್ಷೀಯ ಒಪ್ಪಂದಗಳ ಚೌಕಟ್ಟಿನೊಳಗೆ ಬಗೆಹರಿಸಿಕೊಳ್ಳಬೇಕು ಎಂಬ ಅಭಿಪ್ರಾಯವನ್ನು ಚೀನಾ ವ್ಯಕ್ತಪಡಿಸಿದೆ. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಮತ್ತು ಪಾಕಿಸ್ತಾನದ ಉಪಪ್ರಧಾನಿ ಇಶಾಕ್ ಡಾರ್ ಅವರ ನಡುವಿನ ಏಳನೇ ಕಾರ್ಯತಂತ್ರದ ಚರ್ಚೆಯ ನಂತರ ಹೊರಡಿಸಲಾದ ಜಂಟಿ ಹೇಳಿಕೆಯಲ್ಲಿ ಕಾಶ್ಮೀರದ ಬಗ್ಗೆ ಉಲ್ಲೇಖವಿದೆ; ಆದರೆ ಚೀನಾ ಪಾಕಿಸ್ತಾನದ ಪರವಾಗಿ ಯಾವುದೇ ನಿಲುವನ್ನು ತಳೆದಿಲ್ಲ.
ಜಂಟಿ ಹೇಳಿಕೆಯಲ್ಲಿ, ಜಮ್ಮು-ಕಾಶ್ಮೀರ ಮತ್ತು ಅದಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪಾಕಿಸ್ತಾನವು ಚೀನಾಕ್ಕೆ ಮಾಹಿತಿ ನೀಡಿದೆ ಎಂದು ನಮೂದಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಚೀನಾ, ಜಮ್ಮು-ಕಾಶ್ಮೀರ ವಿವಾದವು ಐತಿಹಾಸಿಕ ಹಿನ್ನೆಲೆ ಹೊಂದಿರುವ ವಿಷಯವಾಗಿದೆ ಎಂಬ ತನ್ನ ಹಳೆಯ ನಿಲುವನ್ನು ಪುನರುಚ್ಚರಿಸಿದೆ.
ಈ ಸಮಸ್ಯೆಯನ್ನು ವಿಶ್ವಸಂಸ್ಥೆಯ ಸನ್ನದು, ಸಂಬಂಧಿತ ಭದ್ರತಾ ಮಂಡಳಿಯ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳ ಆಧಾರದ ಮೇಲೆ ಶಾಂತಿಯುತವಾಗಿ ಬಗೆಹರಿಸುವುದು ಅಗತ್ಯವಾಗಿದೆ. ಉಭಯ ದೇಶಗಳು ಸಮಾನತೆ ಮತ್ತು ಪರಸ್ಪರ ಹಿತಾಸಕ್ತಿಯ ತತ್ವದ ಮೇಲೆ ಗಡಿಯಾಚೆಗಿನ ಜಲಸಂಪನ್ಮೂಲಗಳ ಸಹಕಾರಕ್ಕೆ ಒತ್ತು ನೀಡಿದವು, ಹಾಗೆಯೇ ಅಂತರರಾಷ್ಟ್ರೀಯ ಕಾನೂನುಬದ್ಧ ಜವಾಬ್ದಾರಿಗಳ ಪಾಲನೆ ಮುಖ್ಯವೆಂದು ತಿಳಿಸಿದವು.
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ಬಗ್ಗೆ ಮೌನ!
ಅಂತರರಾಷ್ಟ್ರೀಯ ಮತ್ತು ಪ್ರಾದೇಶಿಕ ಭದ್ರತೆಯ ಮಹತ್ವವನ್ನು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ; ಆದರೆ ಭಾರತವು ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರದ ಬಗ್ಗೆ ಜಂಟಿ ಹೇಳಿಕೆಯಲ್ಲಿ ಯಾವುದೇ ಉಲ್ಲೇಖ ಮಾಡಿಲ್ಲ. ಪಹಲ್ಗಾಮ್ ದಾಳಿಯ ನಂತರ ಭಾರತದ ಸರಕಾರಿ ವ್ಯವಸ್ಥೆಯು ಈ ಒಪ್ಪಂದವನ್ನು ಸ್ಥಗಿತಗೊಳಿಸಿತ್ತು. ಒಟ್ಟಾರೆಯಾಗಿ, ಚೀನಾವು ಸಮತೋಲಿತ ನಿಲುವನ್ನು ತಳೆಯುವ ಮೂಲಕ ಕಾಶ್ಮೀರ ಸಮಸ್ಯೆಗೆ ದ್ವಿಪಕ್ಷೀಯ ಮಾರ್ಗದ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಪಾಕಿಸ್ತಾನಕ್ಕೆ ಸಲಹೆ ನೀಡಿದೆ.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !