ಅಂತರರಾಷ್ಟ್ರೀಯ ಹಿಂದೂ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರವೀಣ್ ತೊಗಾಡಿಯಾ ಅವರ ಆಗ್ರಹ

ಬಿಜ್ನೋರ್ (ಉತ್ತರ ಪ್ರದೇಶ) – ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ನಿರಂತರವಾಗಿ ಗುರಿ ಮಾಡಲಾಗುತ್ತಿದೆ. ಹೇಗೆ ಅಮೆರಿಕವು ವೆನೆಜುವೆಲಾದ ಅಧ್ಯಕ್ಷರನ್ನು ಎತ್ತಿಕೊಂಡು ತರುವ ಕಾರ್ಯಾಚರಣೆ ಮಾಡಿತೋ, ಅದೇ ರೀತಿ ಭಾರತವು ಸಹ ಸೈನ್ಯವನ್ನು ಕಳುಹಿಸಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗುತ್ತಿರುವ ಮಹಮ್ಮದ್ ಯೂನುಸ್ ಅವರನ್ನು ಹಿಡಿದು ತರಬೇಕು, ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷರಾದ ಡಾ. ಪ್ರವೀಣ್ ತೊಗಾಡಿಯಾ ಅವರು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಹಿಂದೂಗಳ ರಕ್ಷಣೆಗಾಗಿ ದೃಢ ಕ್ರಮಗಳನ್ನು ತೆಗೆದುಕೊಳ್ಳಬೇಕು!
ಡಾ. ತೊಗಾಡಿಯಾ ಅವರು ಮಾತು ಮುಂದುವರೆಸಿ, ೧೯೭೧ ರಲ್ಲಿ ಭಾರತದ ಸೇನೆಯು ಬಾಂಗ್ಲಾದೇಶದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಅಗತ್ಯ ಬಿದ್ದರೆ, ಮತ್ತೊಮ್ಮೆ ಹಿಂದೂಗಳ ರಕ್ಷಣೆಗಾಗಿ ದೃಢ ಕ್ರಮಗಳನ್ನು ತೆಗೆದುಕೊಳ್ಳಬೇಕು. ದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿರಲು ಅವರು ಬಹುಸಂಖ್ಯಾತರಾಗಿರುವುದು ಅವಶ್ಯಕವಾಗಿದೆ.
ಜನಸಂಖ್ಯಾ ನಿಯಂತ್ರಣ ಕಾನೂನಿಗೆ ಬೇಡಿಕೆ!
ಉತ್ತರ ಪ್ರದೇಶದ ಬಿಜ್ನೋರ್, ರಾಂಪುರ ಮತ್ತು ಸಹಾರನ್ಪುರ ಜಿಲ್ಲೆಗಳಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗುತ್ತಿದೆ. ಹಿಂದೂಗಳು ಸುರಕ್ಷಿತವಾಗಿರಬೇಕು, ಇದಕ್ಕಾಗಿ ಕಠಿಣ ಕಾನೂನು ಅವಶ್ಯಕವಾಗಿದೆ. ಮೂರಕ್ಕಿಂತ ಹೆಚ್ಚು ಮಕ್ಕಳಿರುವ ಕುಟುಂಬಗಳಿಗೆ ಸರಕಾರಿ ಶಾಲೆಗಳಲ್ಲಿ ಪ್ರವೇಶ, ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ, ಸರಕಾರಿ ಉದ್ಯೋಗ, ಆಹಾರ ಧಾನ್ಯಗಳು ಮತ್ತು ಇತರ ಸರಕಾರಿ ಸೌಲಭ್ಯಗಳನ್ನು ನಿರಾಕರಿಸಬೇಕು. ಅಂತಹ ವ್ಯಕ್ತಿಗಳ ಮತದಾನದ ಹಕ್ಕುಗಳನ್ನು ಸಹ ಕಿತ್ತುಕೊಳ್ಳಬೇಕು, ಹೀಗೆ ಬೇಡಿಕೆಯನ್ನು ಡಾ. ತೊಗಾಡಿಯಾ ಅವರು ಮಾಡಿದರು.
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
‘ಭಾರತವು ಔಷಧಗಳ ಪೆಟ್ಟಿಗೆಯಲ್ಲಿ ಅಫ್ಘಾನಿಸ್ತಾನಕ್ಕೆ ಡ್ರೋನ್ಗಳನ್ನು ಕಳುಹಿಸಿದೆ!’(ಯಂತೆ)
ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 235 ಮಂದಿ ಸಾವು!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast