ಪಾಕಿಸ್ತಾನ ತಕ್ಕ ಉತ್ತರ ನೀಡಲಿದೆ: ಪಾಕ್ ಸೇನಾಧಿಕಾರಿ

ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನಿ ಸೇನೆಯ ಮಾಧ್ಯಮ ವಿಭಾಗದ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹಮದ್ ಶರೀಫ್ ಚೌಧರಿ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಭಾರತವು ಪಾಕಿಸ್ತಾನದಲ್ಲಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ‘ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತ ಮತ್ತು ಭಾರತ ಒಂದಾಗಿ ಪಾಕಿಸ್ತಾನದಲ್ಲಿ ಅಸ್ಥಿರತೆಯನ್ನು ಸೃಷ್ಟಿಸುತ್ತಿವೆ. ಪಾಕಿಸ್ತಾನವು ಇಬ್ಬರನ್ನೂ ಏಕಕಾಲದಲ್ಲಿ ಎದುರಿಸಬಲ್ಲದು. ಆಗಲೂ ಸಮಾಧಾನವಾಗದಿದ್ದರೆ ಹಣ ಹಿಂತಿರುಗಿಸಲಾಗುವುದು’ ಎಂದು ಹಾಸ್ಯಾಸ್ಪದ ಹೇಳಿಕೆ ನೀಡಿದ್ದರು. ಶರೀಫ್ ಚೌಧರಿ ಅವರ ಹೇಳಿಕೆಯ ಬಳಿಕ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಅವರ ಭಾಷಣವನ್ನು ಮೂರನೇ ದರ್ಜೆಯ ಸಿನಿಮಾದ ಸಂಭಾಷಣೆಗಳಿಗೆ ಹೋಲಿಸಿದ್ದಾರೆ. ಇನ್ನು ಕೆಲವರು, ಅವರು ಉನ್ನತ ಹುದ್ದೆಯಲ್ಲಿದ್ದರೂ ಸಹ ಈ ರೀತಿಯಾಗಿ ಹಾಸ್ಯಾಸ್ಪದವಾಗಿ ಮಾತನಾಡುತ್ತಿರುವುದನ್ನು ಕಂಡು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಂಪಾದಕೀಯ ನಿಲುವುಇದಕ್ಕೆ ಹೇಳುವುದು ಕಳ್ಳನಿಗೊಂದು ಪಿಳ್ಳೆ ನೆವ ಅಂತ |
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !