1 ಕೋಟಿ ರೂಪಾಯಿ ಬಹುಮಾನ ಘೋಷಿಸಲಾಗಿದ್ದ ನಕ್ಸಲೀಯ ಸಹಿತ ೧೦ ನಕ್ಸಲೀಯರ ಸಂಹಾರ !

ಚಾಯಿಬಾಸಾ (ಜಾರ್ಖಂಡ್) – ಜಾರ್ಖಂಡ್ ನ ಪಶ್ಚಿಮ ಸಿಂಗಭೂಮ್ ಜಿಲ್ಲೆಯ ಸಾರಂಡಾ ಅರಣ್ಯ ಪ್ರದೇಶದಲ್ಲಿ ಜನವರಿ ೨೨ ರಂದು ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ನಿಷೇಧಿತ ಮಾವೋವಾದಿ ಸಂಘಟನೆಯ ನಕ್ಸಲೀಯರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ೧೦ ಮಂದಿ ಮಾವೋವಾದಿಗಳು ಹತರಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸರಕಾರದಿಂದ ೧ ಕೋಟಿ ರೂಪಾಯಿ ಬಹುಮಾನ ಘೋಷಿಸಲ್ಪಟ್ಟಿದ್ದ ಕುಖ್ಯಾತ ನಕ್ಸಲೀಯ ಅನಲ್ ದಾ ಎಂಬವನು ಈ ಗುಂಡಿನ ಚಕಮಕಿಯಲ್ಲಿ ಹತನಾಗಿದ್ದಾನೆ ಎಂಬ ಸುದ್ಧಿ ಹೊರಬಿದ್ದಿದೆ. ಸದ್ಯ ಈ ಪ್ರದೇಶದಲ್ಲಿ ಸುರಕ್ಷಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆ ಮುಂದುವರಿಸಿವೆ.