ಲಷ್ಕರ್-ಎ-ತೊಯ್ಬಾ ಭಯೋತ್ಪಾದಕನಿಗೆ ೧೦ ವರ್ಷಗಳ ಕಾರಾಗೃಹ ಶಿಕ್ಷೆ


ಕೋಲಕಾತಾ (ಪ.ಬಂಗಾಳ) – ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಸಂಘಟನೆಯ ಭಯೋತ್ಪಾದಕನಿಗೆ ೧೦ ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ಇದರೊಂದಿಗೆ ೭೦,೦೦೦ ರೂಪಾಯಿಗಳ ದಂಡವನ್ನೂ ವಿಧಿಸಿದೆ. ಸೈಯದ್ ಎಮ್. ಇದ್ರಿಸ್ ಎಂಬ ಈ ಭಯೋತ್ಪಾದಕ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದಾನೆ. ಈತ ಪ.ಬಂಗಾಳದಲ್ಲಿ ಮುಸಲ್ಮಾನ ಯುವಕರನ್ನು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಗೆ ಸೇರ್ಪಡೆಗೊಳಿಸುತ್ತಿದ್ದನು. ಈತನ ಇತರ ಇಬ್ಬರು ಸಹಚರರ ವಿರುದ್ಧ ವಿಚಾರಣೆ ಇನ್ನು ನಡೆಯುತ್ತಿದೆ.

ಸಂಪಾದಕೀಯ ನಿಲುವು

ಕಾರಾಗೃಹದಿಂದ ಬಿಡುಗಡೆಯಾದ ನಂತರ ಈತ ಮತ್ತೆ ಭಯೋತ್ಪಾದಕ ಕೆಲಸದಲ್ಲಿ ತೊಡಗುವುದರಲ್ಲಿ ಸಂಶಯವಿಲ್ಲ, ಆದ್ದರಿಂದ ಇಂತಹ ಭಯೋತ್ಪಾದಕರಿಗೆ ಗಲ್ಲು ಶಿಕ್ಷೆಯೇ ನೀಡಬೇಕು!