ನೂತನ ನಗರಸಭೆ ಸದಸ್ಯೆ ಸಹರ್ ಶೇಖ್ ಅವರಿಂದ ಪೊಲೀಸರಿಗೆ ಲಿಖಿತ ಕ್ಷಮಾಪಣೆ!

  • ಪ್ರಚೋದನಾಕಾರಿ ಭಾಷಣದ ಪ್ರಕರಣ

  • ಮನಸ್ಸಿಗೆ ನೋವುಂಟು ಮಾಡುವ ಉದ್ದೇಶ ನನಗಿರಲಿಲ್ಲ ಎಂದು ಸ್ಪಷ್ಟನೆ!

ಮುಂಬ್ರಾ (ಠಾಣೆ ಜಿಲ್ಲೆ) – ‘ಎ.ಐ.ಎಂ.ಐ.ಎಂ.’ (ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್) ಪಕ್ಷದ ನೂತನ ನಗರಸಭೆ ಸದಸ್ಯೆ ಸಹರ್ ಶೇಖ್ ಅವರು ತಮ್ಮ ಲಿಖಿತ ಕ್ಷಮಾಪಣಾ ಪತ್ರವನ್ನು ಪೊಲೀಸರಿಗೆ ಸಲ್ಲಿಸಿದ್ದಾರೆ. ಇಲ್ಲಿ ನಡೆದ ಸಭೆಯೊಂದರಲ್ಲಿ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಜಪ ನಾಯಕ ಕಿರೀಟ್ ಸೋಮಯ್ಯ, ಶಾಸಕ ನಿರಂಜನ್ ದಾವ್ಖರೆ ಸೇರಿದಂತೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಪೊಲೀಸರಿಗೆ ದೂರು ನೀಡಿದ ನಂತರ ಪೊಲೀಸ್ ತನಿಖೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಸಹರ್ ಶೇಖ್ ಕ್ಷಮಾಪಣೆ ಪತ್ರ ನೀಡಿದ್ದಾರೆ. ಈ ಬಗ್ಗೆ ಪೊಲೀಸರು ದೂರುದಾರರಿಗೆ ಲಿಖಿತವಾಗಿ ಮಾಹಿತಿ ನೀಡಿದ್ದಾರೆ. ಕ್ಷಮಾಪಣೆಯನ್ನು ಸ್ವೀಕರಿಸಿದ ನಂತರ ಈ ಪ್ರಕರಣವನ್ನು ಕೈಬಿಡಲಾಗಿದೆ.

“ಭವಿಷ್ಯದಲ್ಲಿ ಇಂತಹ ಹೇಳಿಕೆಗಳು ಪುನರಾವರ್ತನೆಯಾದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ಹಿರಿಯ ಪೊಲೀಸ್ ನಿರೀಕ್ಷಕ ಅನಿಲ್ ಶಿಂದೆ ಅವರು ಕಿರೀಟ್ ಸೋಮಯ್ಯ ಅವರಿಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ಸಹರ್ ಶೇಖ್ ಕ್ಷಮಾಪಣಾ ಪತ್ರದಲ್ಲಿ ಏನಿದೆ?

“ಮುಂಬ್ರಾದಲ್ಲಿ ನಡೆದ ಸಭೆಯಲ್ಲಿ ನಾನು ಬಳಸಿದ ವಾಕ್ಯವು ಪಕ್ಷದ ಧ್ವಜ ಮತ್ತು ಚಿಹ್ನೆಗೆ ಸಂಬಂಧಿಸಿದ್ದಾಗಿತ್ತು. ಯಾರ ಮನಸ್ಸನ್ನೂ ನೋಯಿಸುವ ಅಥವಾ ಸಾಮಾಜಿಕ ವಾತಾವರಣವನ್ನು ಹಾಳು ಮಾಡುವ ಉದ್ದೇಶ ನನಗಿರಲಿಲ್ಲ. ನಾವು ತ್ರಿವರ್ಣಕ್ಕಾಗಿ ಬದುಕುತ್ತೇವೆ ಮತ್ತು ತ್ರವರ್ಣಕ್ಕಾಗಿಯೇ ಸಾಯುತ್ತೇವೆ. ನನ್ನ ಹೇಳಿಕೆಯಿಂದ ಯಾರ ಭಾವನೆಗಳಿಗೆ ಧಕ್ಕೆಯಾಗಿದ್ದರೆ, ನಾನು ಅವರಲ್ಲಿ ಬಹಿರಂಗವಾಗಿ ಮತ್ತು ಲಿಖಿತ ರೂಪದಲ್ಲಿ ಕ್ಷಮೆಯಾಚಿಸುತ್ತೇನೆ.”

 

ಸಂಪಾದಕೀಯ ನಿಲುವು

  • ಕೇವಲ ಕ್ಷಮಾಪಣೆ ಪತ್ರ ನೀಡಿದ ತಕ್ಷಣ ಎಲ್ಲವೂ ಮುಗಿಯಿತು ಎಂದರ್ಥವಲ್ಲ, ಆಡಳಿತ ಮಂಡಳಿಯು ಜನಪ್ರತಿನಿಧಿಗಳು ಇಂತಹ ಹೇಳಿಕೆಗಳನ್ನು ಏಕೆ ನೀಡಿದರು? ಇದರ ಹಿಂದಿನ ಅವರ ಉದ್ದೇಶವೇನು? ಎಂಬುದರ ಕುರಿತು ತನಿಖೆ ನಡೆಸಬೇಕು! ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿದ್ದರೂ, ಪ್ರಚೋದನಾಕಾರಿ ಹೇಳಿಕೆಗಳಿಗೆ ಸ್ಥಾನವಿಲ್ಲ ಎಂಬುದನ್ನು ನೆನಪಿನಲ್ಲಿಡಬೇಕು!
  • ಜನಪ್ರತಿನಿಧಿಗಳಿಗೆ ಸಾಂವಿಧಾನಿಕ ಮೌಲ್ಯಗಳು ಮತ್ತು ಅವರ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವವರು ಯಾರು?