|

ಮುಂಬ್ರಾ (ಠಾಣೆ ಜಿಲ್ಲೆ) – ‘ಎ.ಐ.ಎಂ.ಐ.ಎಂ.’ (ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್) ಪಕ್ಷದ ನೂತನ ನಗರಸಭೆ ಸದಸ್ಯೆ ಸಹರ್ ಶೇಖ್ ಅವರು ತಮ್ಮ ಲಿಖಿತ ಕ್ಷಮಾಪಣಾ ಪತ್ರವನ್ನು ಪೊಲೀಸರಿಗೆ ಸಲ್ಲಿಸಿದ್ದಾರೆ. ಇಲ್ಲಿ ನಡೆದ ಸಭೆಯೊಂದರಲ್ಲಿ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಜಪ ನಾಯಕ ಕಿರೀಟ್ ಸೋಮಯ್ಯ, ಶಾಸಕ ನಿರಂಜನ್ ದಾವ್ಖರೆ ಸೇರಿದಂತೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಪೊಲೀಸರಿಗೆ ದೂರು ನೀಡಿದ ನಂತರ ಪೊಲೀಸ್ ತನಿಖೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಸಹರ್ ಶೇಖ್ ಕ್ಷಮಾಪಣೆ ಪತ್ರ ನೀಡಿದ್ದಾರೆ. ಈ ಬಗ್ಗೆ ಪೊಲೀಸರು ದೂರುದಾರರಿಗೆ ಲಿಖಿತವಾಗಿ ಮಾಹಿತಿ ನೀಡಿದ್ದಾರೆ. ಕ್ಷಮಾಪಣೆಯನ್ನು ಸ್ವೀಕರಿಸಿದ ನಂತರ ಈ ಪ್ರಕರಣವನ್ನು ಕೈಬಿಡಲಾಗಿದೆ.
“ಭವಿಷ್ಯದಲ್ಲಿ ಇಂತಹ ಹೇಳಿಕೆಗಳು ಪುನರಾವರ್ತನೆಯಾದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ಹಿರಿಯ ಪೊಲೀಸ್ ನಿರೀಕ್ಷಕ ಅನಿಲ್ ಶಿಂದೆ ಅವರು ಕಿರೀಟ್ ಸೋಮಯ್ಯ ಅವರಿಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.
सहर शेखच्या "माफीनामा"
AIMIM ऑल इंडिया मजलिस-ए-इत्तेहादुल मुस्लिमीन पक्षाचा सहर शेखनी हिंदुना चिथावणी देणाऱ्या
"हम मुंब्रा को हरा बना देंगे"
ह्या वक्तव्याबद्दल माफी मागितली.मुंब्रा पोलिसांनी माझा तक्रारी नंतर सहर शेखला नोटीस पाठवली होती. मी आज पाठपुरावा साठी मुंब्रा पोलिस… pic.twitter.com/ln9LaeESQe
— Kirit Somaiya (@KiritSomaiya) January 24, 2026
ಸಹರ್ ಶೇಖ್ ಕ್ಷಮಾಪಣಾ ಪತ್ರದಲ್ಲಿ ಏನಿದೆ?“ಮುಂಬ್ರಾದಲ್ಲಿ ನಡೆದ ಸಭೆಯಲ್ಲಿ ನಾನು ಬಳಸಿದ ವಾಕ್ಯವು ಪಕ್ಷದ ಧ್ವಜ ಮತ್ತು ಚಿಹ್ನೆಗೆ ಸಂಬಂಧಿಸಿದ್ದಾಗಿತ್ತು. ಯಾರ ಮನಸ್ಸನ್ನೂ ನೋಯಿಸುವ ಅಥವಾ ಸಾಮಾಜಿಕ ವಾತಾವರಣವನ್ನು ಹಾಳು ಮಾಡುವ ಉದ್ದೇಶ ನನಗಿರಲಿಲ್ಲ. ನಾವು ತ್ರಿವರ್ಣಕ್ಕಾಗಿ ಬದುಕುತ್ತೇವೆ ಮತ್ತು ತ್ರವರ್ಣಕ್ಕಾಗಿಯೇ ಸಾಯುತ್ತೇವೆ. ನನ್ನ ಹೇಳಿಕೆಯಿಂದ ಯಾರ ಭಾವನೆಗಳಿಗೆ ಧಕ್ಕೆಯಾಗಿದ್ದರೆ, ನಾನು ಅವರಲ್ಲಿ ಬಹಿರಂಗವಾಗಿ ಮತ್ತು ಲಿಖಿತ ರೂಪದಲ್ಲಿ ಕ್ಷಮೆಯಾಚಿಸುತ್ತೇನೆ.” |
ಸಂಪಾದಕೀಯ ನಿಲುವು
|
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !