ಬಾಂಗ್ಲಾದೇಶಿ ನುಸುಳುಕೋರರನ್ನು ಪತ್ತೆಹಚ್ಚಿದ ವ್ಯಕ್ತಿಗೆ ಪೊಲೀಸರಿಂದಲೇ ಕಿರುಕುಳ!

ಸಂತ್ರಸ್ತ ವ್ಯಕ್ತಿಯಿಂದ ಆತ್ಮಹತ್ಯೆಗೆ ಯತ್ನ!

ಬೆಂಗಳೂರು – ಬಾಂಗ್ಲಾದೇಶಿ ನುಸುಳುಕೋರರನ್ನು ಪತ್ತೆಹಚ್ಚಿದ ವ್ಯಕ್ತಿಗೆ ಪೊಲೀಸರೇ ಕಿರುಕುಳ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಪೊಲೀಸರು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ವ್ಯಕ್ತಿ ಡಾ. ನಾಗೇಂದ್ರ ಅವರು ರಾಜ್ಯ ವಿಧಾನಸೌಧದ ಮುಂದೆ ಆತ್ಮಹತ್ಯೆಗೆ ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಕೀಯ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಡಾ. ನಾಗೇಂದ್ರ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಸಂಪಾದಕೀಯ ನಿಲುವು

ಬಾಂಗ್ಲಾದೇಶಿ ನುಸುಳುಕೋರರನ್ನು ಪತ್ತೆಹಚ್ಚುವ ಕೆಲಸವನ್ನು ಪೊಲೀಸರು ಮತ್ತು ಆಡಳಿತ ಮಂಡಳಿ ಮಾಡಬೇಕೆಂದು ನಿರೀಕ್ಷಿಸಲಾಗುತ್ತದೆ; ಆದರೆ ಅವರು ಇದರಲ್ಲಿ ವಿಫಲರಾಗಿದ್ದಾರೆ. ತದ್ವಿರುದ್ಧ, ಈ ಕೆಲಸದಲ್ಲಿ ಸಹಕರಿಸುವ ಹಿಂದುತ್ವವಾದಿಗಳನ್ನೇ ಪೊಲೀಸರು ಬಂಧಿಸುತ್ತಿದ್ದಾರೆ. ಇಂತಹ ಪೊಲೀಸರು ಬಾಂಗ್ಲಾದೇಶದವರೋ ಅಥವಾ ಭಾರತದವರೋ ?