ಸರಕು ಸಾಗಣೆ ರೈಲಿಗೆ ಹಾನಿ, ಚಾಲಕನಿಗೆ ಗಾಯ

ಚಂಡೀಗಢ – ಪಂಜಾಬ್ನ ಫತೇಘಡ ಸಾಹಿಬ್ ಜಿಲ್ಲೆಯಲ್ಲಿ ಗಣರಾಜ್ಯೋತ್ಸವದ ಮುನ್ನ ರೈಲ್ವೆ ಹಳಿಯ ಮೇಲೆ ಬಾಂಬ್ ಸ್ಫೋಟಿಸಿದ ಘಟನೆ ನಡೆದಿದೆ. ಈ ಸ್ಫೋಟವು ಖಾನ್ಪುರ ಸಮೀಪದ ರೈಲ್ವೆ ಹಳಿಯ ಮೇಲೆ ರಾತ್ರಿ 10 ಗಂಟೆಗೆ ಸಂಭವಿಸಿದೆ. ಸ್ಫೋಟದ ಸಮಯದಲ್ಲಿ ಅಲ್ಲಿಂದ ಸರಕು ಸಾಗಣೆ ರೈಲೊಂದು ಹಾದುಹೋಗುತ್ತಿತ್ತು. ಸ್ಫೋಟದ ತೀವ್ರತೆಗೆ ರೈಲಿನ ಇಂಜಿನ್ ಹಾನಿಗೀಡಾಗಿದೆ. ಈ ಅವಘಡದಲ್ಲಿ ರೈಲಿನ ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದಿಂದಾಗಿ ರೈಲ್ವೆ ಹಳಿಯ ಸುಮಾರು 12 ಅಡಿ ಭಾಗವು ಸಂಪೂರ್ಣವಾಗಿ ಧ್ವಂಸಗೊಂಡಿದೆ. ಈ ಘಟನೆಯ ನಂತರ ಇಡೀ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ರೋಪರ್ ವಲಯದ ಉಪ ಮಹಾನಿರೀಕ್ಷಕ (DIG) ನಾನಕ್ ಸಿಂಗ್ ಮಾತನಾಡಿ, “ಇದು ಅತಿ ದೊಡ್ಡ ಸ್ಫೋಟವೇನಲ್ಲ. ಪಂಜಾಬ್ ಪೊಲೀಸರು ವೈಜ್ಞಾನಿಕವಾಗಿ ಇದರ ತನಿಖೆ ನಡೆಸುತ್ತಿದ್ದಾರೆ. ತನಿಖಾ ಸಂಸ್ಥೆಗಳೊಂದಿಗೂ ಸಂಪರ್ಕ ಸಾಧಿಸಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಕರಣವನ್ನು ಭೇದಿಸಲಾಗುವುದು,” ಎಂದು ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಅಣ್ವಸ್ತ್ರಧಾರಿ ಭಾರತವು ಇಂದಿಗೂ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಮತ್ತು ಹಿಂದೂಗಳ ಎಲ್ಲಾ ಹಬ್ಬಗಳನ್ನು ಭಯೋತ್ಪಾದನೆಯ ಕರಿನೆರಳಿನಲ್ಲಿ ಆಚರಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ! |
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ