ಸರಕು ಸಾಗಣೆ ರೈಲಿಗೆ ಹಾನಿ, ಚಾಲಕನಿಗೆ ಗಾಯ

ಚಂಡೀಗಢ – ಪಂಜಾಬ್ನ ಫತೇಘಡ ಸಾಹಿಬ್ ಜಿಲ್ಲೆಯಲ್ಲಿ ಗಣರಾಜ್ಯೋತ್ಸವದ ಮುನ್ನ ರೈಲ್ವೆ ಹಳಿಯ ಮೇಲೆ ಬಾಂಬ್ ಸ್ಫೋಟಿಸಿದ ಘಟನೆ ನಡೆದಿದೆ. ಈ ಸ್ಫೋಟವು ಖಾನ್ಪುರ ಸಮೀಪದ ರೈಲ್ವೆ ಹಳಿಯ ಮೇಲೆ ರಾತ್ರಿ 10 ಗಂಟೆಗೆ ಸಂಭವಿಸಿದೆ. ಸ್ಫೋಟದ ಸಮಯದಲ್ಲಿ ಅಲ್ಲಿಂದ ಸರಕು ಸಾಗಣೆ ರೈಲೊಂದು ಹಾದುಹೋಗುತ್ತಿತ್ತು. ಸ್ಫೋಟದ ತೀವ್ರತೆಗೆ ರೈಲಿನ ಇಂಜಿನ್ ಹಾನಿಗೀಡಾಗಿದೆ. ಈ ಅವಘಡದಲ್ಲಿ ರೈಲಿನ ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದಿಂದಾಗಿ ರೈಲ್ವೆ ಹಳಿಯ ಸುಮಾರು 12 ಅಡಿ ಭಾಗವು ಸಂಪೂರ್ಣವಾಗಿ ಧ್ವಂಸಗೊಂಡಿದೆ. ಈ ಘಟನೆಯ ನಂತರ ಇಡೀ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ರೋಪರ್ ವಲಯದ ಉಪ ಮಹಾನಿರೀಕ್ಷಕ (DIG) ನಾನಕ್ ಸಿಂಗ್ ಮಾತನಾಡಿ, “ಇದು ಅತಿ ದೊಡ್ಡ ಸ್ಫೋಟವೇನಲ್ಲ. ಪಂಜಾಬ್ ಪೊಲೀಸರು ವೈಜ್ಞಾನಿಕವಾಗಿ ಇದರ ತನಿಖೆ ನಡೆಸುತ್ತಿದ್ದಾರೆ. ತನಿಖಾ ಸಂಸ್ಥೆಗಳೊಂದಿಗೂ ಸಂಪರ್ಕ ಸಾಧಿಸಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಕರಣವನ್ನು ಭೇದಿಸಲಾಗುವುದು,” ಎಂದು ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಅಣ್ವಸ್ತ್ರಧಾರಿ ಭಾರತವು ಇಂದಿಗೂ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಮತ್ತು ಹಿಂದೂಗಳ ಎಲ್ಲಾ ಹಬ್ಬಗಳನ್ನು ಭಯೋತ್ಪಾದನೆಯ ಕರಿನೆರಳಿನಲ್ಲಿ ಆಚರಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ! |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ