
ಮುಂಬಯಿ – ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಅಲ್ಲಿ ಇತ್ತೀಚೆಗೆ ಇಬ್ಬರು ಹಿಂದೂಗಳನ್ನು ಜೀವಂತವಾಗಿ ಸುಡಲಾಗಿದೆ. ಕಳೆದ 4-5 ತಿಂಗಳುಗಳಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆಗಳು ಸತತವಾಗಿ ನಡೆಯುತ್ತಲೇ ಇವೆ. ದೇವಸ್ಥಾನಗಳನ್ನು ಧ್ವಂಸಗೊಳಿಸಲಾಗುತ್ತಿದೆ. ಹಿಂದೂಗಳ ಮನೆಗಳ ಮೇಲೆ ಆಕ್ರಮಣಗಳು ನಡೆಯುತ್ತಿವೆ ಮತ್ತು ಹಿಂದೂಗಳನ್ನು ಸುಡಲಾಗುತ್ತಿದೆ. ಕೇವಲ ಶಾಂತಿಯ ಸಂದೇಶವನ್ನು ನೀಡುವ ಮೂಲಕ ಬಾಂಗ್ಲಾದೇಶದ ಹಿಂದೂಗಳ ಹತ್ಯೆಗಳು ನಿಲ್ಲುತ್ತವೆಯೇ ಅಥವಾ ಇಂದಿರಾ ಗಾಂಧಿಯವರಂತೆ ಸೈನಿಕ ಕಾರ್ಯಾಚರಣೆ ನಡೆಸುವ ಮೂಲಕ ಅಲ್ಲಿ ಶಾಂತಿ ನೆಲೆಸುತ್ತದೆ ಎಂಬುದನ್ನು ಕೇಂದ್ರ ಸರಕಾರವು ವಿಚಾರ ಮಾಡಬೇಕೆಂದು ಉದ್ಧವ ಬಾಳಾಸಾಹೇಬ ಠಾಕ್ರೆ ಪಕ್ಷದ ಸಂಸದರಾದ ಸಂಜಯ ರಾವುತ್ ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ರಾವುತ ಅವರು, ನಮ್ಮ ದೇಶವು ಖಂಡಿತವಾಗಿಯೂ ಶಾಂತಿಪ್ರಿಯವಾಗಿದೆ. ನಾವು ಎಂದಿಗೂ ಯಾರ ಮೇಲೆಯೂ ಸ್ವತಃ ಆಕ್ರಮಣ ಮಾಡುವುದಿಲ್ಲ; ಆದರೆ ಬಾಂಗ್ಲಾದೇಶದಲ್ಲಿ ನೂರಾರು ಹಿಂದೂಗಳ ಹತ್ಯೆಗೀಡಾಗುತ್ತಿದ್ದರೆ, ಶಾಂತಿಯ ಸಂದೇಶಕ್ಕೆ ಯಾವುದೇ ಅರ್ಥವಿರುವುದಿಲ್ಲ. ಇದರರ್ಥ ‘ಯುದ್ಧ ಮಾಡಿ’ ಎಂದಲ್ಲ; ಆದರೆ ಬಾಂಗ್ಲಾದೇಶದ ಹಿಂದೂಗಳ ಪ್ರಾಣ ಮತ್ತು ಆಸ್ತಿಯನ್ನು ರಕ್ಷಿಸಲೇಬೇಕಾಗಿದೆ. ಆದ್ದರಿಂದ ರಾಷ್ಟ್ರಪತಿಗಳು ಮತ್ತು ಪ್ರಧಾನ ಮಂತ್ರಿಗಳು ಕೇವಲ ಶಾಂತಿಯ ಸಂದೇಶಗಳನ್ನು ನೀಡಿದರೆ ಪ್ರಯೋಜನವಿಲ್ಲ. ಭಾರತದಲ್ಲಿಯೂ ಎಲ್ಲಾ ಕ್ಷೇತ್ರಗಳಲ್ಲಿ ಅಶಾಂತಿ ಮತ್ತು ಅಸ್ಥಿರತೆ ಇದೆ. ಆದ್ದರಿಂದ ಯಾವಾಗ ಶಾಂತಿಯ ಸಂದೇಶವನ್ನು ನೀಡಲಾಗುತ್ತದೆಯೋ, ಆಗ ಭಾರತದಲ್ಲಿ ಅಶಾಂತಿಗೆ ಕಾರಣ ಯಾರು? ಅದಕ್ಕೆ ಜವಾಬ್ದಾರರು ಯಾರು? ಎಂಬುದನ್ನು ಜನರು ಖಂಡಿತವಾಗಿಯೂ ಯೋಚಿಸುತ್ತಾರೆ. ಜಗತ್ತಿಗೆ ಶಾಂತಿಯ ಸಂದೇಶ ನೀಡುವಾಗ ರಾಷ್ಟ್ರಪತಿಗಳು ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರ ಕಡೆಗೂ ಗಮನ ಹರಿಸುವುದು ಅವಶ್ಯಕವಾಗಿದೆ ಎಂದು ಅವರು ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ