ಬದ್ರಿನಾಥ ಮತ್ತು ಕೇದಾರನಾಥ ದೇವಸ್ಥಾನದ ಪರಿಸರದಲ್ಲಿ ಹಿಂದೂಯೇತರರ ಪ್ರವೇಶಕ್ಕೆ ನಿಷೇಧ!

ಕೇದಾರನಾಥ (ಉತ್ತರಾಖಂಡ) – ಬದ್ರಿನಾಥ ಧಾಮ, ಕೇದಾರನಾಥ ಧಾಮ ಮತ್ತು ದೇವಸ್ಥಾನ ಸಮಿತಿಯ ಅಡಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸಲಾಗುವುದು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಮುಂಬರುವ ಮಂಡಳಿ ಸಭೆಯಲ್ಲಿ ಅಧಿಕೃತ ಪ್ರಸ್ತಾವನೆಯನ್ನು ಅಂಗೀಕರಿಸಲಾಗುವುದು, ಎಂದು ಬದ್ರಿನಾಥ-ಕೇದಾರನಾಥ ದೇವಸ್ಥಾನ ಸಮಿತಿಯ ಅಧ್ಯಕ್ಷರು ಮತ್ತು ಭಾಜಪದ ಹಿರಿಯ ನಾಯಕ ಹೇಮಂತ್ ದ್ವಿವೇದಿ ಮಾಹಿತಿ ನೀಡಿದ್ದಾರೆ. ಅವರು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಮಾರ್ಗದರ್ಶನದಲ್ಲಿ ಮುಸ್ಲಿಮರ ಅಕ್ರಮ ಮಜಾರ್‌ಗಳನ್ನು ತೆರವುಗೊಳಿಸುವ ಕ್ರಮವನ್ನೂ ಶ್ಲಾಘಿಸಿದರು.

ದ್ವಿವೇದಿಯವರು ಮಾತನಾಡುತ್ತಾ, “ದೇವಭೂಮಿ ಉತ್ತರಾಖಂಡದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುವುದು ನಮ್ಮ ಅತ್ಯುನ್ನತ ಆದ್ಯತೆಯಾಗಿದೆ. ಕೇದಾರ ಖಂಡದಿಂದ ಮಾನಸ ಖಂಡದವರೆಗೆ ಸ್ಥಾಪಿಸಲಾದ ದೇವಾಲಯಗಳ ಸರಪಳಿಯಲ್ಲಿ ಸಾಂಪ್ರದಾಯಿಕವಾಗಿ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಲಾಗಿದೆ; ಆದರೆ ಬಿಜೆಪಿಯೇತರ ಸರಕಾರಗಳಿದ್ದಾಗ ಈ ಸಂಪ್ರದಾಯಗಳ ಉಲ್ಲಂಘನೆಯಾಗುತ್ತಿತ್ತು. ಆದ್ದರಿಂದ ಸಂಪ್ರದಾಯಗಳ ಸರಿಯಾದ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.