
ಬಾರಾಮತಿ (ಜಿಲ್ಲೆ ಪುಣೆ) – ಮಹಾರಾಷ್ಟ್ರ ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯು ಜನವರಿ 29 ರಂದು ಮಧ್ಯಾಹ್ನ 12.15 ಗಂಟೆಗೆ ಬಾರಾಮತಿಯ ‘ವಿದ್ಯಾ ಪ್ರತಿಷ್ಠಾನ’ದ ಮೈದಾನದಲ್ಲಿ ಶೋಕಯುಕ್ತ ವಾತಾವರಣದಲ್ಲಿ ಮತ್ತು ಸರಕಾರಿ ಗೌರವಗಳೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾಹ, ನಿತಿನ್ ಗಡಕರಿ, ಭಾಜಪ ಅಧ್ಯಕ್ಷ ನಿತಿನ್ ನವೀನ್, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ ಶಿಂಧೆ, ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ, ಹಾಗೂ ಮಹಾರಾಷ್ಟ್ರ ರಾಜ್ಯ ಸಚಿವ ಸಂಪುಟದ ಸಚಿವರು ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ನಡೆದ ಅಂತ್ಯಯಾತ್ರೆಯಲ್ಲಿ ಸಹಸ್ರಾರು ಜನರು ಪಾಲ್ಗೊಂಡಿದ್ದರು.
ಜಿಲ್ಲಾ ಪಂಚಾಯತ ಮತ್ತು ಪಂಚಾಯತ ಸಮಿತಿ ಚುನಾವಣೆಯ ಪ್ರಚಾರಕ್ಕಾಗಿ ಜನವರಿ 28 ರಂದು ಬೆಳಿಗ್ಗೆ ಬಾರಾಮತಿಗೆ ಬರುತ್ತಿದ್ದಾಗ ಸಂಭವಿಸಿದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ 5 ಜನರು ಮೃತಪಟ್ಟಿದ್ದರು. ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ಜನವರಿ 29 ರಂದು ಬೆಳಿಗ್ಗೆ ಕೆಲಕಾಲ ಅವರ ಕಾಟೇವಾಡಿಯ ನಿವಾಸಕ್ಕೆ ತರಲಾಗಿತ್ತು. ನಂತರ ಕಾಟೇವಾಡಿಯಿಂದ ವಿದ್ಯಾ ಪ್ರತಿಷ್ಠಾನದವರೆಗೆ ಅವರ ಅಂತ್ಯಯಾತ್ರೆ ನಡೆಸಲಾಯಿತು. ಈ ಅಂತ್ಯಯಾತ್ರೆಯು ವಿದ್ಯಾ ಪ್ರತಿಷ್ಠಾನಕ್ಕೆ ತಲುಪಿದಾಗ ಅಲ್ಲಿ ಲಕ್ಷಾಂತರ ಜನರ ಸಮೂಹವೇ ನೆರೆದಿತ್ತು. ಇದಾದ ನಂತರ ಅವರ ಪುತ್ರರಾದ ಪಾರ್ಥ ಮತ್ತು ಜಯ್ ಪವಾರ ಅವರು ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು, ಈ ಸಮಯದಲ್ಲಿ ಉಪಸ್ಥಿತರಿದ್ದ ಸಹಸ್ರಾರು ಬೆಂಬಲಿಗರು ಮತ್ತು ಕಾರ್ಯಕರ್ತರ ಕಣ್ಣುಗಳು ತೇವಗೊಂಡವು. ಅಜಿತ್ ಪವಾರ್ ಅವರ ಪಾರ್ಥಿವ ಶರೀರದೊಂದಿಗೆ ಪವಾರ್ ಕುಟುಂಬದ ಎಲ್ಲಾ ಸದಸ್ಯರು ಬಂದಿದ್ದರು. ಮಹಾರಾಷ್ಟ್ರ ಪೊಲೀಸ್ ಪಡೆಯ ವತಿಯಿಂದ ಗಾಳಿಯಲ್ಲಿ ಗುಂಡು ಹಾರಿಸಿ ಮತ್ತು ಬಿಗುಲ್ ಮೊಳಗಿಸುವ ಮೂಲಕ ಅಜಿತ್ ಪವಾರ್ ಅವರಿಗೆ ಕೊನೆಯ ಗೌರವ ಸಲ್ಲಿಸಲಾಯಿತು. ರಾಜ್ಯ ಸರಕಾರವು ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !