
ಕಾನ್ಪುರ (ಉತ್ತರ ಪ್ರದೇಶ) – ಇಲ್ಲಿನ ಪಂಕಿ ಪ್ರದೇಶದಲ್ಲಿ ರೋಹಿತ್ ಎಂಬ ಯುವಕ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಈ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಆತ ಮಾತನಾಡುತ್ತಿರುವ ವಿಡಿಯೋವೊಂದನ್ನು ಹರಿಬಿಟ್ಟಿದ್ದನು. ಅದರಲ್ಲಿ ಆತ, “ನನ್ನ ಮೇಲೆ ಮತಾಂತರವಾಗುವಂತೆ ಒತ್ತಡ ಹೇರಲಾಗುತ್ತಿದೆ; ಆದರೆ ನಾನು ಯಾವುದೇ ಕಾರಣಕ್ಕೂ ನನ್ನ ಧರ್ಮವನ್ನು ಬಿಡುವುದಿಲ್ಲ” ಎಂದು ಹೇಳಿದ್ದಾನೆ. ಘಟನೆಯ ನಂತರ ಮೃತನ ಸಂಬಂಧಿಕರು ರಸ್ತೆಯ ಮೇಲೆ ಶವವನ್ನಿಟ್ಟು ಪ್ರತಿಭಟನೆ ನಡೆಸಿದರು ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
೧. ರೋಹಿತ್ ತನ್ನ ವಿಡಿಯೋ ಸಂದೇಶದಲ್ಲಿ, “ದೇಶದಲ್ಲಿನ ಮಾದಕ ವ್ಯಸನವನ್ನು ತಡೆಯಬೇಕು ಮತ್ತು ಮಹಿಳೆಯರಿಗೆ ಗೌರವ ನೀಡಬೇಕು. ನನ್ನ ಜೀವನದಲ್ಲಿ ನನ್ನಿಂದಾದ ತಪ್ಪುಗಳಿಗಾಗಿ ನಾನು ಕ್ಷಮೆ ಯಾಚಿಸುತ್ತೇನೆ” ಎಂದು ಹೇಳಿದ್ದಾನೆ.
೨. ರೋಹಿತ್ ಮೇಲೆ ದೀರ್ಘಕಾಲದಿಂದ ಮತಾಂತರಕ್ಕಾಗಿ ಒತ್ತಡ ಹೇರಲಾಗುತ್ತಿತ್ತು, ಅದೇ ಕಾರಣಕ್ಕಾಗಿ ಆತ ಈ ಹಂತಕ್ಕೆ ತಲುಪಿದ್ದಾನೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಕಳೆದ ೩ ರಿಂದ ೪ ದಿನಗಳಿಂದ ರೋಹಿತ್ ನಡವಳಿಕೆ ಅಸಹಜವಾಗಿತ್ತು. ಆತ ಲಕ್ಷ್ಮಣಪುರಿಗೆ (ಲಕ್ನೋ) ಹೋಗಿದ್ದಾಗ ಕೆಲವರು ಆತನ ಮೇಲೆ ಹಲ್ಲೆ ನಡೆಸಿದ್ದರು ಎಂದು ಆತನ ಸಹೋದರಿ ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಉತ್ತರ ಪ್ರದೇಶದಲ್ಲಿ ಮತಾಂತರ ವಿರೋಧಿ ಕಾಯ್ದೆ ಜಾರಿಯಲ್ಲಿದ್ದರೂ ಸಹ ಹಿಂದೂಗಳು ಈ ರೀತಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಉತ್ತರ ಪ್ರದೇಶವು ಮತಾಂತರದ ಕೇಂದ್ರವಾಗುತ್ತಿರುವುದನ್ನು ಗಮನಿಸಿದರೆ, ಸರಕಾರವು ಈ ಕಾಯ್ದೆಯನ್ನು ಇನ್ನಷ್ಟು ಕಠಿಣಗೊಳಿಸುವುದು ಅತ್ಯಗತ್ಯವಾಗಿದೆ! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !