ಭಾರತೀಯ ಸೇನೆಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ‘ISI’ ಗೆ ರವಾನಿಸಿದ ಆರೋಪ!
(ISI: ಇಂಟರ್ ಸರ್ವಿಸ್ ಇಂಟೆಲಿಜೆನ್ಸ್ – ಪಾಕಿಸ್ತಾನದ ಗುಪ್ತಚರ ಸಂಸ್ಥೆ)

ಪೋಖರಣ್ (ರಾಜಸ್ಥಾನ) – ಪಾಕಿಸ್ತಾನದ ಗಡಿಭಾಗದಲ್ಲಿರುವ ಜೈಸಲ್ಮೇರ್ ಜಿಲ್ಲೆಯ ಪೋಖರಣ್ ಪ್ರದೇಶದಲ್ಲಿ ‘ISI’ ಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಸ್ಥಳೀಯ ಯುವಕನೊಬ್ಬನನ್ನು ರಾಜಸ್ಥಾನ ಪೊಲೀಸರ ಗುಪ್ತಚರ ವಿಭಾಗವು ಇತ್ತೀಚೆಗೆ ಬಂಧಿಸಿದೆ. ಆರೋಪಿಯು ಭಾರತೀಯ ಸೇನೆಗೆ ಸಂಬಂಧಿಸಿದ ಯುದ್ಧತಂತ್ರದ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದನು.
1. ರಾಜ್ಯದಲ್ಲಿ ಪಾಕಿಸ್ತಾನಿ ಗುಪ್ತಚರ ಸಂಸ್ಥೆಗಳ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಿಸಲಾಗಿದೆ ಎಂದು ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಪ್ರಫುಲ್ ಕುಮಾರ್ ತಿಳಿಸಿದ್ದಾರೆ.
2. ಇದೇ ಅವಧಿಯಲ್ಲಿ ಪೋಖರಣ್ ತಾಲ್ಲೂಕಿನ ನೆಡಾನ್ ಗ್ರಾಮದ ಝಬರಾರಾಮ್ (28 ವರ್ಷ) ಎಂಬಾತನ ಚಟುವಟಿಕೆಗಳು ಸಂದೇಹಾಸ್ಪದವಾಗಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಆರೋಪಿಯು ನಿರಂತರವಾಗಿ ಪಾಕಿಸ್ತಾನಿ ಹ್ಯಾಂಡ್ಲರ್ಗಳ (ಸಂಪರ್ಕ ಅಧಿಕಾರಿಗಳು) ಜೊತೆ ಸಂಪರ್ಕದಲ್ಲಿದ್ದನು.
3. ತನಿಖೆ ಮತ್ತು ಮೊಬೈಲ್ ಫೋನ್ನ ತಾಂತ್ರಿಕ ಪರೀಕ್ಷೆಯ ಸಮಯದಲ್ಲಿ ಗಂಭೀರ ವಿಷಯಗಳು ಬೆಳಕಿಗೆ ಬಂದಿವೆ. ಪಾಕಿಸ್ತಾನಿ ಸಂಸ್ಥೆಗಳು ಆತನನ್ನು ‘ಹನಿ ಟ್ರ್ಯಾಪ್’ (ಮಹಿಳೆಯರ ಮೂಲಕ ವ್ಯಕ್ತಿಯನ್ನು ಬಲೆಗೆ ಬೀಳಿಸುವುದು) ಮೂಲಕ ಸಿಲುಕಿಸಿ ಹಣದ ಆಮಿಷ ಒಡ್ಡಿದ್ದವು. ಈ ಆಮಿಷಕ್ಕೆ ಒಳಗಾದ ಆರೋಪಿಯು ಭಾರತೀಯ ಸೇನೆಗೆ ಸಂಬಂಧಿಸಿದ ಅತ್ಯಂತ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದನು.
4. ಪೊಲೀಸರು ಝಬರಾರಾಮ್ನನ್ನು ಜೈಪುರದ ಕೇಂದ್ರ ತನಿಖಾ ಕೇಂದ್ರಕ್ಕೆ ಕರೆತಂದಿದ್ದಾರೆ. ರಾಜಸ್ಥಾನ ಪೊಲೀಸ್, ಸೇನಾ ಗುಪ್ತಚರ ಸಂಸ್ಥೆ ಮತ್ತು ಇತರ ಭದ್ರತಾ ಸಂಸ್ಥೆಗಳು ಜಂಟಿಯಾಗಿ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿವೆ. ಅಪರಾಧ ಸಾಬೀತಾದ ನಂತರ, ರಾಜಸ್ಥಾನ ಪೊಲೀಸರು ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿ ಆತನನ್ನು ಬಂಧಿಸಿದ್ದಾರೆ.
ಸಂಪಾದಕೀಯ ನಿಲುವುಇಂತಹ ದೇಶದ್ರೋಹಿಗಳ ವಿರುದ್ಧ ತ್ವರಿತ ಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಅವರಿಗೆ ಗಲ್ಲು ಶಿಕ್ಷೆಯಾಗುವಂತೆ ಪ್ರಯತ್ನಿಸುವುದು ಅತ್ಯಗತ್ಯ! |
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ