ಛತ್ತೀಸ್‌ಗಢ: ದೇವಸ್ಥಾನ ಧ್ವಂಸಗೊಳಿಸಿದ ಮುಸ್ಲಿಮರು ಜಾಮೀನಿನ ಮೇಲೆ ಬಿಡುಗಡೆ; ಹಿಂದೂಗಳ ಮೇಲೆ ಮತ್ತೆ ದಾಳಿ! – Chhattisgarh Violence

ಆರು ಪೊಲೀಸ್ ಸಿಬ್ಬಂದಿಗೆ ಗಾಯ

ರಾಯಪುರ (ಛತ್ತೀಸ್‌ಗಢ) – ರಾಜ್ಯದ ಗರಿಯಾಬಂದ್ ಜಿಲ್ಲೆಯ ದೂಧಕೈಯಾ ಗ್ರಾಮದಲ್ಲಿ ಫೆಬ್ರವರಿ 1 ರಂದು ಸಂಜೆ, ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದ ಮುಸ್ಲಿಂ ಆರೋಪಿಗಳು ಹಿಂದೂಗಳ ಮೇಲೆ ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ಈ ಹಿಂಸಾಚಾರದಲ್ಲಿ 6 ಪೊಲೀಸರು ಗಾಯಗೊಂಡಿದ್ದಾರೆ.

ದೇವಸ್ಥಾನ ಧ್ವಂಸ ಪ್ರಕರಣದ ಹಿನ್ನೆಲೆ

4 ತಿಂಗಳ ಹಿಂದೆ ಇದೇ ಪ್ರದೇಶದಲ್ಲಿ ಕೆಲವು ಮುಸ್ಲಿಮರು ಗ್ರಾಮದ ಶಿವ ಮಂದಿರವನ್ನು ಧ್ವಂಸಗೊಳಿಸಿ ಅಪವಿತ್ರಗೊಳಿಸಿದ್ದರು. ಅದರ ನಂತರ ಫಿಂಗೇಶ್ವರ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದರು. ಈ ಆರೋಪಿಗಳು ಜಾಮೀನಿನ ಮೇಲೆ ಹೊರಬಂದ ನಂತರ ಗ್ರಾಮದ ದೂರುದಾರರು ಮತ್ತು ಗ್ರಾಮಸ್ಥರ ಮೇಲೆ ದಾಳಿ ಮಾಡಿದ್ದಾರೆ. ಆರೋಪಿ ಆರಿಫ್ ತನ್ನ ಇಬ್ಬರು ಸಹಚರರೊಂದಿಗೆ ಕೆಲವು ಜನರ ಮೇಲೆ ದಾಳಿ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಆಯುಧಗಳನ್ನು ಹಿಡಿದ ಈ ಆರೋಪಿಗಳು ಗ್ರಾಮಸ್ಥರ ಮೇಲೆ ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ. ಕೆಲವು ಯುವಕರ ಮೇಲೆ ಕಲ್ಲು ಮತ್ತು ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಲಾಗಿದೆ. ಇದರ ನಂತರ ಆಕ್ರೋಶಗೊಂಡ ಜನರು ಪರಸ್ಪರರ ಮನೆಗಳ ಮೇಲೆ ದಾಳಿ ಮಾಡಿದರು. ಹಲವು ಮನೆಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸ್ ಅಧೀಕ್ಷಕರು ಸ್ಥಳಕ್ಕೆ ಧಾವಿಸಿದರು. ಸುತ್ತಮುತ್ತಲಿನ ಪೊಲೀಸ್ ಠಾಣೆಗಳಿಂದ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ. ಪ್ರಸ್ತುತ ಗ್ರಾಮದಲ್ಲಿ ಕರ್ಫ್ಯೂನಂತಹ ಪರಿಸ್ಥಿತಿ ಇದ್ದು, ಶಾಂತಿ ಕಾಪಾಡುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ.

ಸಂಪಾದಕೀಯ ನಿಲುವು

  • ಛತ್ತೀಸ್‌ಗಢದಲ್ಲಿ ಬಿಜೆಪಿ ಸರಕಾರವಿರುವಾಗ ಇಂತಹ ಘಟನೆಗಳು ನಡೆಯಬಾರದೆಂಬುದು ಹಿಂದೂಗಳ ಆಶಯವಾಗಿದೆ! 
  • ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದು ತಪ್ಪು ಎಂಬುದು ಇದರಿಂದ ಸಾಬೀತಾಗುತ್ತದೆ! ಈಗ ಆರೋಪಿಗಳ ವಿರುದ್ಧ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಜೀವಾವಧಿ ಶಿಕ್ಷೆ ವಿಧಿಸಬೇಕು!