ಕಾಂಗ್ರೆಸ್ನ 7 ಮತ್ತು ಸಿಪಿಐ(ಎಂ)ನ ಓರ್ವ ಸಂಸದ ಅಮಾನತು

ನವ ದೆಹಲಿ – ಸಂಸತ್ತಿನ ಬಜೆಟ್ ಅಧಿವೇಶನದ ಐದನೇ ದಿನದಂದು ಲೋಕಸಭೆಯ ಕಲಾಪವು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಯಿತು; ಆದರೆ ಅದು ಕೇವಲ 8 ನಿಮಿಷಗಳ ಕಾಲ ಮಾತ್ರ ನಡೆಯಿತು. ವಿರೋಧ ಪಕ್ಷದವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದಾಗಿ ಸದನದ ಕಲಾಪವನ್ನು ಹಲವು ಬಾರಿ ಮುಂದೂಡಲಾಯಿತು. ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೆಲವು ಸಂಸದರು ಲೋಕಸಭೆಯ ಸಭಾಧ್ಯಕ್ಷರ ಕಡೆಗೆ ಕಾಗದಗಳನ್ನು ಎಸೆದರು. ಈ ಅಶಿಸ್ತಿನ ವರ್ತನೆಯಿಂದಾಗಿ ಕಾಂಗ್ರೆಸ್ನ 7 ಮತ್ತು ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ (ಸಿಪಿಐ-ಎಂ) ಒಬ್ಬರು ಸೇರಿದಂತೆ ಒಟ್ಟು 8 ಸಂಸದರನ್ನು ಇಡೀ ಬಜೆಟ್ ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ.
ಲೋಕಸಭೆಯ ಸಭಾಧ್ಯಕ್ಷರಾದ ಓಂ ಬಿರ್ಲಾ ಅವರು ಮಾತನಾಡಿ, “ಘೋಷಣೆಗಳನ್ನು ಕೂಗುವುದು ತಪ್ಪು ಮತ್ತು ನಿಯಮಗಳಿಗೆ ವಿರುದ್ಧವಾಗಿದೆ” ಎಂದು ತಿಳಿಸಿದರು. ಆದರೂ ವಿರೋಧ ಪಕ್ಷದವರು ಗದ್ದಲವನ್ನು ಮುಂದುವರಿಸಿದರು. ಈ ಸಂದರ್ಭದಲ್ಲಿ ಕ್ರಮ ಕೈಗೊಂಡ ಸಭಾಧ್ಯಕ್ಷರು ಕಾಗದ ಎಸೆದ 8 ಸಂಸದರನ್ನು ಅಮಾನತು ಮಾಡಿದರು. ಇದರಲ್ಲಿ ಮಣಿಕಂ ಟ್ಯಾಗೋರ್, ಗುರ್ಜೀತ್ ಔಜ್ಲಾ, ರಾಜಾ ವಡಿಂಗ್, ಹಿಬಿ ಈಡನ್, ಕಿರಣ್ ರೆಡ್ಡಿ, ಪ್ರಶಾಂತ್ ಪೋಡೋಲೆ, ವೆಂಕಟ್ ರಾಮನ್ ಮತ್ತು ಡೀನ್ ಕುರಿಯಾಕೋಸ್ ಸೇರಿದ್ದಾರೆ. ಅಮಾನತುಗೊಂಡ ಹಿನ್ನೆಲೆಯಲ್ಲಿ ಈ ಸಂಸದರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಸದನದ ಕಲಾಪವು ಯಾವುದೇ ಅಡೆತಡೆಯಿಲ್ಲದೆ ನಡೆಯುವಂತಾಗಲು ಸಭಾಧ್ಯಕ್ಷ ಓಂ ಬಿರ್ಲಾ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರೊಂದಿಗೆ ಸಭೆ ನಡೆಸಿದರು. ಸದನದ ಹೊರಗೆ ವಿರೋಧ ಪಕ್ಷದ ಸಂಸದರು ಅಮೆರಿಕ-ಭಾರತ ವ್ಯಾಪಾರ ಒಪ್ಪಂದದ ವಿರುದ್ಧವೂ ಘೋಷಣೆಗಳನ್ನು ಕೂಗಿದರು.
ಸಂಪಾದಕೀಯ ನಿಲುವುಲೋಕಸಭೆಯ ಸಭಾಧ್ಯಕ್ಷರನ್ನು ಗೌರವಿಸದ ಸಂಸದರು, ಸಾಮಾನ್ಯ ಜನರನ್ನು ಹೇಗೆ ನಡೆಸಿಕೊಳ್ಳಬಹುದು ಎಂಬುದನ್ನು ಊಹಿಸದಿರುವುದೇ ಲೇಸು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ