ಭಾರತ ಬಿಟ್ಟು ತೆರಳುವಂತೆ ಆದೇಶ

ಜೈಪುರ (ರಾಜಸ್ಥಾನ) – ರಾಜ್ಯದ ಹಿಂದೂಗಳ ಪವಿತ್ರ ಪುಣ್ಯಕ್ಷೇತ್ರವಾದ ಪುಷ್ಕರದಲ್ಲಿ ಆಕ್ಷೇಪಾರ್ಹ ಕೃತ್ಯ ಎಸಗಿದ ಇಬ್ಬರು ಬ್ರಿಟಿಷ್ ಪ್ರಜೆಗಳ ವೀಸಾವನ್ನು ರದ್ದುಗೊಳಿಸಲಾಗಿದೆ. ಇವರು ಇಲ್ಲಿನ ಗಲ್ಲಿಗಳಲ್ಲಿ ಇಸ್ರೇಲ್ ವಿರೋಧಿ ಮತ್ತು ಪ್ಯಾಲೆಸ್ಟೈನ್ ಪರ ಸ್ಟಿಕ್ಕರ್ಗಳನ್ನು (ಭಿತ್ತಿಪತ್ರಗಳನ್ನು) ಅಂಟಿಸುತ್ತಿರುವ ಮಾಹಿತಿ ಗುಪ್ತಚರ ಇಲಾಖೆಗೆ ಲಭಿಸಿತ್ತು. ಇದರ ಆಧಾರದ ಮೇಲೆ ಆಡಳಿತ ಮಂಡಳಿಯು ತಕ್ಷಣವೇ ಇಬ್ಬರ ವೀಸಾವನ್ನು ರದ್ದುಗೊಳಿಸಿ, ಭಾರತವನ್ನು ತೊರೆಯುವಂತೆ ಆದೇಶಿಸಿದೆ.
ಲೂಯಿಸ್ ಗೇಬ್ರಿಯಲ್ ಮತ್ತು ಆತನ ಗೆಳತಿ ಅನುಶಿ ಎಮ್ಮಾ ಎಂಬುವವರೇ ಈ ಬ್ರಿಟಿಷ್ ಪ್ರಜೆಗಳಾಗಿದ್ದು, ಇವರು ಪ್ರವಾಸಿ ವೀಸಾದ ಮೇಲೆ ಭಾರತ ಪ್ರವಾಸಕ್ಕೆ ಬಂದಿದ್ದರು. ಇವರು ರಾಜಕೀಯ ಸ್ವರೂಪದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ಘಟನೆಯು ಜನವರಿ 21 ರಂದು ನಡೆದಿದೆ. ಪುಷ್ಕರದ ಗಲ್ಲಿಗಳಲ್ಲಿ ರಾಜಕೀಯ ಸಂದೇಶವಿರುವ ಸ್ಟಿಕ್ಕರ್ಗಳನ್ನು ಅಂಟಿಸಲಾಗುತ್ತಿದೆ ಎಂದು ಪೊಲೀಸರಿಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಸಿಕ್ಕಿತ್ತು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಈ ಬ್ರಿಟಿಷ್ ದಂಪತಿಯ ಗುರುತು ಪತ್ತೆಯಾಗಿದ್ದು, ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಯಿತು. ಪುಷ್ಕರದಲ್ಲಿ ಇಸ್ರೇಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿರುವುದರಿಂದ ಭದ್ರತಾ ಸಂಸ್ಥೆಗಳು ಹೆಚ್ಚಿನ ಜಾಗರೂಕತೆ ವಹಿಸಿವೆ.
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!