ಶಿವನಿಗೆ ಪ್ರಿಯವಾದ ಬಿಲ್ವಪತ್ರೆಯನ್ನು ಅರ್ಪಿಸುವುದು

ತ್ರಿದಲಂ ತ್ರಿಗುಣಾಕಾರಂ ತ್ರಿನೇತ್ರಂ ಚ ತ್ರಯಾಯುಧಮ್ |

ತ್ರಿಜನ್ಮಪಾಪಸಂಹಾರಂ ಏಕಬಿಲ್ವಂ ಶಿವಾರ್ಪಣಮ್ || – ಬಿಲ್ವಾಷ್ಟಕ, ಶ್ಲೋಕ ೧

ಅರ್ಥ : ಮೂರು ಎಲೆಗಳಿರುವ, ತ್ರಿಗುಣಗಳಂತಿರುವ, ಮೂರು ಕಣ್ಣುಗಳಂತಿರುವ, ಮೂರು ಆಯುಧಗಳಂತಿರುವ ಮತ್ತು ಮೂರು ಜನ್ಮಗಳ ಪಾಪಗಳನ್ನು ನಾಶ ಮಾಡುವ ಈ ಬಿಲ್ವಪತ್ರೆಯನ್ನು ನಾನು ಶಿವನಿಗೆ ಅರ್ಪಿಸುತ್ತೇನೆ. ‘ಓಂ ನಮಃ ಶಿವಾಯ’ ಈ ಮಂತ್ರವನ್ನು ಜಪಿಸುತ್ತಾ ಅಥವಾ ಭಗವಾನ್ ಶಂಕರನ ಒಂದು ಹೆಸರನ್ನು ಉಚ್ಚರಿಸುತ್ತಾ ಒಂದೊಂದೆ ಬಿಲ್ವಪತ್ರೆಯನ್ನು ಶಿವಲಿಂಗಕ್ಕೆ ಅರ್ಪಿಸುವುದನ್ನು ಬಿಲ್ವಾರ್ಚನೆ ಎನ್ನುತ್ತಾರೆ.