ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ನಿಂದ ಮಾಹಿತಿ

ಜೈಪುರ (ರಾಜಸ್ಥಾನ) – ಸಿಂಧೂ ನದಿಯ ನೀರನ್ನು ಪಾಕಿಸ್ತಾನಕ್ಕೆ ನೀಡಲ್ಲ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ತಡೆದು ಭಾರತದ ಹಿತಾಸಕ್ತಿಗಾಗಿ ಬಳಸಿಕೊಳ್ಳಲಾಗುವುದು. ಈ ನೀರಿನ ಲಾಭವು ಹರಿಯಾಣ, ಪಂಜಾಬ್, ರಾಜಸ್ಥಾನ ಮತ್ತು ದೆಹಲಿ ರಾಜ್ಯಗಳಿಗೆ ಸಿಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರವು ಕಾರ್ಯಯೋಜನೆಯನ್ನು ಸಿದ್ಧಪಡಿಸುತ್ತಿದೆ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಬೇರೆಡೆಗೆ ತಿರುಗಿಸಲು ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಮಾಹಿತಿ ನೀಡಿದರು.
ಯಮುನಾ ಜಲ ಯೋಜನೆಯ ಕೆಲಸವನ್ನು ವೇಗವಾಗಿ ಮಾಡಲಾಗುವುದು, ಇದರಿಂದ ನೀರಿನ ಉತ್ತಮ ನಿರ್ವಹಣೆ ಮತ್ತು ಬಳಕೆಯಿಂದ ರಾಜ್ಯಗಳಿಗೆ ಹೆಚ್ಚಿನ ಲಾಭ ಸಿಗಲಿದೆ ಎಂದು ಪಾಟೀಲ್ ಹೇಳಿದರು. ಯಮುನಾ ನದಿಯ ನೀರಿನ ಮೇಲೆ ರಾಜಸ್ಥಾನಕ್ಕೆ ಹಕ್ಕಿತ್ತು; ಆದರೆ ಹಿಂದಿನ ಸರಕಾರಗಳು ಈ ನಿಟ್ಟಿನಲ್ಲಿ ಯಾವುದೇ ದೃಢವಾದ ಪ್ರಯತ್ನಗಳನ್ನು ಮಾಡಲಿಲ್ಲ. ಈಗ ಹರಿಯಾಣ ಮತ್ತು ರಾಜಸ್ಥಾನ ಸರಕಾರಗಳ ನಡುವೆ ಯೋಜನಾ ವರದಿ ಸಿದ್ಧಪಡಿಸುವ ಕುರಿತು ಒಮ್ಮತ ಏರ್ಪಟ್ಟಿದೆ. ಶೀಘ್ರದಲ್ಲೇ ಈ ಯೋಜನೆಯ ಕೆಲಸ ಆರಂಭವಾಗಲಿದೆ. ಜಲವಾಹಿನಿ (ಪೈಪ್ಲೈನ್) ಮೂಲಕ ನೀರು ತರುವ ಈ ಯೋಜನೆಯ ಅಂದಾಜು ವೆಚ್ಚ ೭೭ ಸಾವಿರ ಕೋಟಿಯಿಂದ ೧ ಲಕ್ಷ ಕೋಟಿ ರೂಪಾಯಿಗಳಾಗಬಹುದು. ಪ್ರಸ್ತುತ ರಾಜಸ್ಥಾನದ ಬಳಿ ಅತ್ಯಂತ ಕಡಿಮೆ ನೀರಿದೆ; ಆದರೆ ಮುಂಬರುವ ದಿನಗಳಲ್ಲಿ ರಾಜಸ್ಥಾನದ ಬಳಿ ಗರಿಷ್ಠ ಪ್ರಮಾಣದ ನೀರು ಇರಲಿದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !