ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ನಿಂದ ಮಾಹಿತಿ

ಜೈಪುರ (ರಾಜಸ್ಥಾನ) – ಸಿಂಧೂ ನದಿಯ ನೀರನ್ನು ಪಾಕಿಸ್ತಾನಕ್ಕೆ ನೀಡಲ್ಲ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ತಡೆದು ಭಾರತದ ಹಿತಾಸಕ್ತಿಗಾಗಿ ಬಳಸಿಕೊಳ್ಳಲಾಗುವುದು. ಈ ನೀರಿನ ಲಾಭವು ಹರಿಯಾಣ, ಪಂಜಾಬ್, ರಾಜಸ್ಥಾನ ಮತ್ತು ದೆಹಲಿ ರಾಜ್ಯಗಳಿಗೆ ಸಿಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರವು ಕಾರ್ಯಯೋಜನೆಯನ್ನು ಸಿದ್ಧಪಡಿಸುತ್ತಿದೆ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಬೇರೆಡೆಗೆ ತಿರುಗಿಸಲು ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಮಾಹಿತಿ ನೀಡಿದರು.
ಯಮುನಾ ಜಲ ಯೋಜನೆಯ ಕೆಲಸವನ್ನು ವೇಗವಾಗಿ ಮಾಡಲಾಗುವುದು, ಇದರಿಂದ ನೀರಿನ ಉತ್ತಮ ನಿರ್ವಹಣೆ ಮತ್ತು ಬಳಕೆಯಿಂದ ರಾಜ್ಯಗಳಿಗೆ ಹೆಚ್ಚಿನ ಲಾಭ ಸಿಗಲಿದೆ ಎಂದು ಪಾಟೀಲ್ ಹೇಳಿದರು. ಯಮುನಾ ನದಿಯ ನೀರಿನ ಮೇಲೆ ರಾಜಸ್ಥಾನಕ್ಕೆ ಹಕ್ಕಿತ್ತು; ಆದರೆ ಹಿಂದಿನ ಸರಕಾರಗಳು ಈ ನಿಟ್ಟಿನಲ್ಲಿ ಯಾವುದೇ ದೃಢವಾದ ಪ್ರಯತ್ನಗಳನ್ನು ಮಾಡಲಿಲ್ಲ. ಈಗ ಹರಿಯಾಣ ಮತ್ತು ರಾಜಸ್ಥಾನ ಸರಕಾರಗಳ ನಡುವೆ ಯೋಜನಾ ವರದಿ ಸಿದ್ಧಪಡಿಸುವ ಕುರಿತು ಒಮ್ಮತ ಏರ್ಪಟ್ಟಿದೆ. ಶೀಘ್ರದಲ್ಲೇ ಈ ಯೋಜನೆಯ ಕೆಲಸ ಆರಂಭವಾಗಲಿದೆ. ಜಲವಾಹಿನಿ (ಪೈಪ್ಲೈನ್) ಮೂಲಕ ನೀರು ತರುವ ಈ ಯೋಜನೆಯ ಅಂದಾಜು ವೆಚ್ಚ ೭೭ ಸಾವಿರ ಕೋಟಿಯಿಂದ ೧ ಲಕ್ಷ ಕೋಟಿ ರೂಪಾಯಿಗಳಾಗಬಹುದು. ಪ್ರಸ್ತುತ ರಾಜಸ್ಥಾನದ ಬಳಿ ಅತ್ಯಂತ ಕಡಿಮೆ ನೀರಿದೆ; ಆದರೆ ಮುಂಬರುವ ದಿನಗಳಲ್ಲಿ ರಾಜಸ್ಥಾನದ ಬಳಿ ಗರಿಷ್ಠ ಪ್ರಮಾಣದ ನೀರು ಇರಲಿದೆ.
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!