|

ತಿರುವನಂತಪುರಂ (ಕೇರಳ) – ಹಿಂದೂ ದೇವಸ್ಥಾನಗಳಲ್ಲಿ ಅಹಿಂದೂಗಳ ಪ್ರವೇಶದ ಮೇಲಿನ ಸಂಪೂರ್ಣ ನಿಷೇಧದ ನಿಯಮವನ್ನು ಸಾಂವಿಧಾನಿಕ ತತ್ವಗಳಿಗೆ ಅನುಗುಣವಾಗಿ ಮರುಪರಿಶೀಲಿಸಬೇಕು. ಇದರಿಂದ ಧಾರ್ಮಿಕ ಸ್ಥಳಗಳನ್ನು ನಿಯಂತ್ರಿಸುವ ಕಾನೂನುಗಳು ಸಾಮಾಜಿಕ ಅಸ್ಥಿರತೆ ಅಥವಾ ವಿವಾದಗಳಿಗೆ ಕಾರಣವಾಗಬಾರದು ಎಂದು ಕೇರಳ ಉಚ್ಚ ನ್ಯಾಯಾಲಯವು ಇತ್ತೀಚಿನ ತೀರ್ಪಿನಲ್ಲಿ ತಿಳಿಸಿದೆ. ಹಿಂದೂ ಹಬ್ಬಗಳ ಸಂದರ್ಭದಲ್ಲಿ ದೇವಸ್ಥಾನಕ್ಕೆ ಕ್ರಿಶ್ಚಿಯನ್ ಧರ್ಮಗುರುಗಳ ಪ್ರವೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ. ಅರ್ಜಿಯನ್ನು ವಜಾಗೊಳಿಸುವಾಗ, ‘ಕೇರಳ ಹಿಂದೂ ಸಾರ್ವಜನಿಕ ಆರಾಧನಾ ಸ್ಥಳಗಳ ನಿಯಮಗಳು, 1965’ ರ ನಿಯಮ 3(ಎ) ಅನ್ನು ಪ್ರಸ್ತುತ ರೂಪದಲ್ಲೇ ಮುಂದುವರಿಸಬೇಕೇ ಅಥವಾ ಧಾರ್ಮಿಕ ಪಾಲುದಾರರೊಂದಿಗೆ ಸಮಾಲೋಚಿಸಿ ತಿದ್ದುಪಡಿ ಮಾಡಬೇಕೇ ಎಂಬುದನ್ನು ಪರಿಶೀಲಿಸುವಂತೆ ನ್ಯಾಯಾಲಯವು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.
ಪ್ರಕರಣದ ಹಿನ್ನೆಲೆ ಏನು?
ಈ ವಿವಾದವು ಸೆಪ್ಟೆಂಬರ್ 7, 2023 ರಂದು ಪಥನಂತಿಟ್ಟ ಜಿಲ್ಲೆಯ ಅಡೂರ್ ಶ್ರೀ ಪಾರ್ಥಸಾರಥಿ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಂದರ್ಭದಲ್ಲಿ ನಡೆದ ಘಟನೆಯಿಂದ ಉಂಟಾಗಿದೆ. ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮಕ್ಕೆ ದೇವಸ್ಥಾನದ ಆಡಳಿತ ಮಂಡಳಿಯು ಇಬ್ಬರು ಕ್ರಿಶ್ಚಿಯನ್ ಪಾದ್ರಿಗಳನ್ನು ಆಹ್ವಾನಿಸಿತ್ತು. ಕಾರ್ಯಕ್ರಮದ ನಂತರ, ಆ ಪಾದ್ರಿಗಳನ್ನು ಶ್ರೀಕೋವಿಲ್ (ಗರ್ಭಗುಡಿ) ಸಮೀಪದ ಒಳಾಂಗಣಕ್ಕೆ ಕರೆದೊಯ್ದು ಸನ್ಮಾನಿಸಲಾಯಿತು. ಪಾದ್ರಿಗಳು ಧಾರ್ಮಿಕ ಉಡುಪಿನಲ್ಲಿದ್ದ ಕಾರಣ ಕೆಲವು ಹಿಂದೂ ಭಕ್ತರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಕೇರಳ ಹಿಂದೂ ಸಾರ್ವಜನಿಕ ಉಪಾಸನೆ ಸ್ಥಳ ಅಧಿನಿಯಮ 1965 ರ ನಿಯಮಗಳ ಪ್ರಕಾರ ಅಹಿಂದೂಗಳಿಗೆ ದೇವಸ್ಥಾನದೊಳಗೆ ಪ್ರವೇಶವಿಲ್ಲ ಎಂಬುದು ಅವರ ವಾದವಾಗಿತ್ತು.
ದೇವಸ್ಥಾನದ ಭಕ್ತರಾದ ಸನಿಲ ನಾರಾಯಣನ್ ನಂಬೂತಿರಿ ಅವರು ಕೇರಳ ಉಚ್ಚ ನ್ಯಾಯಾಲದ ಮೆಟ್ಟಿಲೇರಿದ್ದರು. ದೇವಸ್ಥಾನದ ಆಡಳಿತ ಮಂಡಳಿಯು ಪಾದ್ರಿಗಳಿಗೆ ಪ್ರವೇಶ ನೀಡುವ ಮೂಲಕ ಕಾನೂನು ಉಲ್ಲಂಘಿಸಿದೆ ಎಂದು ಅವರು ಆರೋಪಿಸಿದ್ದರು. ಅಲ್ಲದೆ ದೇವಸ್ಥಾನದ ಸಲಹಾ ಸಮಿತಿಯ ಸದಸ್ಯರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಮತ್ತು ಅವರನ್ನು ಪದಚ್ಯುತಗೊಳಿಸಬೇಕು, ಎಂದು ಬೇಡಿಕೆ ಇಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಹಿಂದೂಗಳ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು
ದೇವಸ್ಥಾನದ ಪವಿತ್ರತೆಯನ್ನು ಮರುಸ್ಥಾಪಿಸಲು ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲು ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ